ಮಂಗಳೂರು: ನಗರದ ಪುರಭವನದ ಪ್ರವೇಶ ದ್ವಾರದ ಬಳಿಯ ಮಲ್ಯ ರಸ್ತೆಯಲ್ಲಿ ಮಂಗಳವಾರ ರಾತ್ರಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ರಾತ್ರಿ ನಗರದಲ್ಲಿ ಗುಡುಗು, ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಆ ಬಳಿಕ ಮಲ್ಯ ರಸ್ತೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ಸಿಡಿಲು ಬಡಿದು ಮತ್ತು ಬೀದಿದೀಪದ ಸಂಪರ್ಕದಿಂದ ವಿದ್ಯುತ್ ಪ್ರವಹಿಸಿ ಸಾವಿಗೀಡಾಗಿರುವ ಸಾಧ್ಯತೆ ಕಂಡುಬಂದಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ ತಿಳಿಸಿದ್ದಾರೆ.
ಬಿಜೈ ಕಾಪಿಕ್ಕಾಡ್ ನಲ್ಲಿ ಜೆ.ಜೆ.ವಿ. ಫರ್ನಾಂಡಿಸ್ ಎಂಬುವವರ ಮನೆಗೆ ಸಿಡಿಲು ಬಡಿದು ಬೆಂಕಿ ತಗುಲಿದೆ. ಇವರ ಮನೆಯ ಸಮೀಪದಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಹೊತ್ತಿಕೊಂಡ ಬೆಂಕಿ ಮನೆಗೂ ತಗುಲಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.