ಹಿರಿಯ ಕವಿ ಸಿದ್ದಲಿಂಗಯ್ಯ ಅವರು ನಿಧನರಾಗಿದ್ದಾರೆ. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದ ಅವರು, ದಲಿತ ಕವಿ ಎಂದೇ ಜನಪ್ರಿಯರಾಗಿದ್ದವರು. ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ 1988-94 ಮತ್ತು 1995-2001ರವರೆಗೆ ಎರಡುಬಾರಿ ನಾಮಕರಣಗೊಂಡಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅವರ ಕೆಲವು ಅಪರೂಪದ ಕ್ಷಣಗಳ ಫೋಟೊಗಳು ಇಲ್ಲಿವೆ.– ಪ್ರಜಾವಾಣಿ ಸಂಗ್ರಹ ಚಿತ್ರಗಳುಓದಿ –ಹಿರಿಯ ಕವಿ ಸಿದ್ದಲಿಂಗಯ್ಯ ನಿಧನ
ಪ್ರಜಾವಾಣಿ ವಾರ್ತೆ
Published 11 ಜೂನ್ 2021, 14:47 IST
Last Updated 11 ಜೂನ್ 2021, 14:47 IST
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಲಂಕೇಶ್ ಸಾಹಿತ್ಯ ಸಪ್ತಾಹದ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಮತ್ತು ಇತರ ಗಣ್ಯರ ಜತೆ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಚಿದಾನಂದ ಮೂರ್ತಿ, ಡಾ.ಎಸ್.ನಾಗರಾಜು, ಪುಂಡಲೀಕ ಹಾಲಂಬಿ ಜತೆ ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಕವಿ ಸಿದ್ದಲಿಂಗಯ್ಯ – ಪ್ರಜಾವಾಣಿ ಸಂಗ್ರಹ ಚಿತ್ರ/ ಎಂ.ಎಸ್.ಮಂಜುನಾಥ್
ಸಿದ್ದಲಿಂಗಯ್ಯ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2008ರ ಮಾರ್ಚ್ 3ರಂದು ಕರ್ನಾಟಕ, ತಮಿಳುನಾಡಿನ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹೊಗೆನಕಲ್ ಜಲಪಾತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. –ಪ್ರಜಾವಾಣಿ ಚಿತ್ರ/ಸಿ.ಆರ್.ವೆಂಕಟರಾಮು
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಈ ವರ್ಷದ ಮಾರ್ಚ್ 27ರಂದು ನಡೆದಿದ್ದ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಸಿದ್ದಲಿಂಗಯ್ಯ ಅವರು ಮಾತನಾಡಿದ್ದರು. ಕಾಲು ನೋವಿನ ಕಾರಣಕ್ಕೆ ಕುಳಿತುಕೊಂಡೇ ಭಾಷಣ ಮಾಡಿದ್ದರು.