Photos| ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ರ್ಯಾಲಿ
ಪೆಟ್ರೋಲ್ ಮತ್ತು ಡೀಸೆಲ್ ದರ ನಿರಂತರವಾಗಿಏರುತ್ತಿರುವುದನ್ನು ವಿರೋಧಿಸಿ ಇಂದು (ಸೋಮವಾರ) ಪ್ರತಿಭಟನೆ ನಡೆಸಿತು. ಪ್ರತಿಭಟನೆ ಸ್ಥಳಕ್ಕೆಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಸೈಕಲ್ನಲ್ಲಿ ತೆರಳಿದರು.ಈ ಸಂದರ್ಭದಲ್ಲಿ ಪಕ್ಷದ ನಾಯಕರು ಕಾರ್ಯಕರ್ತರು ಸಾಥ್ ನೀಡಿದರು.ಮೊದಲಿಗೆ ಕೆಪಿಸಿಸಿ ಕಚೇರಿ ತಲುಪಿದ ನಾಯಕರು ನಂತರಮೀನ್ಸ್ ಸ್ಕ್ವೆರ್ ವೃತ್ತದಲ್ಲಿರುವ ಆದಾಯ ತೆರಿಗೆ ಕಟ್ಟಡದ ಕಡೆ ಹೊರಟ ಸೈಕಲ್ ರ್ಯಾಲಿಯಲ್ಲಿ ಹೊರಟರು.ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಈ ರ್ಯಾಲಿಯಲ್ಲಿ ಭಾಗವಹಿಸಿದ್ದರು.