ADVERTISEMENT

IPL 2021 | RCB vs CSK: ವಿರಾಟ್-ಪಡಿಕ್ಕಲ್ ಹೋರಾಟ ವ್ಯರ್ಥ; ಆರ್‌ಸಿಬಿ ವಿರುದ್ಧ ಚೆನ್ನೈ ಜಯಭೇರಿ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಗದೊಂದು ಸೋಲಿನ ಆಘಾತಕ್ಕೊಳಗಾಗಿದೆ. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರು ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ. ಇದರೊಂದಿಗೆ ನಾಯಕ ವಿರಾಟ್ ಕೊಹ್ಲಿ (53) ಹಾಗೂ ದೇವದತ್ತ ಪಡಿಕ್ಕಲ್ (70) ಪಡಿಕ್ಕಲ್ ಹೋರಾಟವು ವ್ಯರ್ಥವೆನಿಸಿದೆ.

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 18:04 IST
Last Updated 24 ಸೆಪ್ಟೆಂಬರ್ 2021, 18:04 IST

ಧೋನಿ ಬಳಗದ ವಿರುದ್ಧ ಕೊಹ್ಲಿ ಪಡೆಗೆ ಸೋಲು

ಅಗ್ರಸ್ಥಾನಕ್ಕೇರಿದ ಚೆನ್ನೈ

ಗೆಲುವಿನ ಓಟ ಮುಂದುವರಿಸಿದ ಚೆನ್ನೈ

ಆರ್‌ಸಿಬಿಗೆ ಸೋಲಿನ ಆಘಾತ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆರು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. 

ಇದರೊಂದಿಗೆ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ (53) ಹಾಗೂ ದೇವದತ್ತ ಪಡಿಕ್ಕಲ್ (70) ಪಡಿಕ್ಕಲ್ ಹೋರಾಟವು ವ್ಯರ್ಥವೆನಿಸಿದೆ. 

ADVERTISEMENT

ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಆರ್‌ಸಿಬಿ ತಂಡವು ಆರು ವಿಕೆಟ್ ನಷ್ಟ್ಕಕೆ 156 ರನ್‌ಗಳ ಸ್ಪರ್ಧಾತ್ಮಕ ಗುರಿ ಪೇರಿಸಿತ್ತು. ಗುರಿ ಬೆನ್ನತ್ತಿದ ಚೆನ್ನೈ ಇನ್ನು 11 ಎಸೆತಗಳು ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು. 

ಫೀಲ್ಡಿಂಗ್‌ನಲ್ಲೂ ಮಿಂಚಿದ ಕೊಹ್ಲಿ

ಹರ್ಷಲ್ ಪಟೇಲ್ ನಿಖರ ದಾಳಿ

15 ಓವರ್‌ಗಳ ಅಂತ್ಯಕ್ಕೆ ಚೆನ್ನೈ 125/3

ಮೊಯಿನ್ ಅಲಿ 23 ರನ್ ಗಳಿಸಿ ಔಟಾದರು. ಅಂತಿಮ 5 ಓವರ್‌ಗಳಲ್ಲಿ ಚೆನ್ನೈ ಗೆಲುವಿಗೆ 32 ರನ್‌ಗಳ ಅಗತ್ಯವಿತ್ತು. 

ಟೀಕಾಕಾರರಿಗೆ ವಿರಾಟ್ ಕೊಹ್ಲಿ ಉತ್ತರ

ವಿರಾಟ್ ಅದ್ಭುತ ಕ್ಯಾಚ್, ಚೆನ್ನೈ ಮೊದಲ ವಿಕೆಟ್ ಪತನ

ಯಜುವೇಂದ್ರ ಚಾಹಲ್ ದಾಳಿಯಲ್ಲಿ ವಿರಾಟ್ ಕೊಹ್ಲಿ ಅಧ್ಭುತ ಕ್ಯಾಚ್ ಹಿಡಿದರು. ಪರಿಣಾಮ ಋತುರಾಜ್ ಗಾಯಕವಾಡ್ (38) ಪೆವಿಲಿಯನ್‌ಗೆ ಮರಳಬೇಕಾಯಿತು. ಆದರೂ ಮೊದಲ ವಿಕೆಟ್‌ಗೆ ಫಾಫ್ ಡು ಪ್ಲೆಸಿ ಜೊತೆಗೆ 8.2 ಓವರ್‌ಗಳಲ್ಲಿ 71 ರನ್‌ಗಳ ಜೊತೆಯಾಟ ನೀಡಿದರು. 

ಗಾಯಕವಾಡ್ ಬೆನ್ನಲ್ಲೇ ಫಾಫ್ ಡು ಪ್ಲೆಸಿ (31) ವಿಕೆಟ್ ಪತನವಾಯಿತು. ಈ ವೇಳೆ ಚೆನ್ನೈ 71 ರನ್ ಗಳಿಸಿತ್ತು. 

ಚೆನ್ನೈ ಬಿರುಸಿನ ಆರಂಭ

157 ರನ್ ಗುರಿಯನ್ನು ಬೆನ್ನತ್ತಿದ ಚೆನ್ನೈ ತಂಡಕ್ಕೆ ಆರಂಭಿಕರಾದ ಋತುರಾಜ್ ಗಾಯಕವಾಡ್ ಹಾಗೂ ಫಾಫ್ ಡು ಪ್ಲೆಸಿ ಬಿರುಸಿನ ಆರಂಭವೊದಗಿಸಿದರು. ಪರಿಣಾಮ ಪವರ್ ಪ್ಲೇಯಲ್ಲಿ ವಿಕೆಟ್ ನಷ್ಟವಿಲ್ಲದೆ 59 ರನ್‌ ಗಳಿಸಿತ್ತು. 

ಅಂತಿಮ ಹಂತದಲ್ಲಿ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳ ವೈಫಲ್ಯ

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಆರ್‌ಸಿಬಿ ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಬಿರುಸಿನ ಆರಂಭವೊದಗಿಸಿದರು. 

ದೀಪಕ್ ಚಾಹರ್ ಎಸೆದ ಇನ್ನಿಂಗ್ಸ್‌ನ ಮೊದಲೆರಡು ಎಸೆತಗಳನ್ನು ಬೌಂಡರಿಗಟ್ಟಿದ ಕೊಹ್ಲಿ ಎದುರಾಳಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದರು. ಕೊಹ್ಲಿ ಹಾಗೂ ಪಡಿಕ್ಕಲ್ ಬಿರುಸಿನ ಆಟದ ಮೂಲಕ ಗಮನ ಸೆಳೆದರು. ಅಲ್ಲದೆ 5.3 ಓವರ್‌ಗಳಲ್ಲೇ 50 ರನ್ ಹರಿದು ಬಂದಿದ್ದವು. 

ಚೆನ್ನೈ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಈ ಜೋಡಿಯು ಶತಕದ ಜೊತೆಯಾಟವನ್ನು ನೀಡಿದರು. ಪಡಿಕ್ಕಲ್ 35 ಹಾಗೂ ವಿರಾಟ್ 36 ಎಸೆತಗಳಲ್ಲಿ ಫಿಫ್ಟಿ ಸಾಧನೆ ಮಾಡಿ ಗಮನ ಸೆಳೆದರು. 

ಆದರೆ ಫಿಫ್ಟಿ ಬೆನ್ನಲ್ಲೇ ವಿರಾಟ್ ವಿಕೆಟ್ ನಷ್ಟವಾಯಿತು. ಆಗಲೇ ಪಡಿಕ್ಕಲ್ ಜೊತೆಗೆ 13.2 ಓವರ್‌ಗಳಲ್ಲಿ 111 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. 41 ಎಸೆತಗಳನ್ನು ಎದುರಿಸಿದ ವಿರಾಟ್ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು. 

ಆರ್‌ಸಿಬಿ ಪರ 150ನೇ ಪಂದ್ಯ ಆಡುತ್ತಿರುವ ಎಬಿ ಡಿವಿಲಿಯರ್ಸ್ (12) ನಿರಾಸೆ ಮೂಡಿಸಿದರು. ಈ ಮಧ್ಯೆ ಉತ್ತಮವಾಗಿ ಆಡುತ್ತಿದ್ದ ಪಡಿಕ್ಕಲ್ ವಿಕೆಟ್ ನಷ್ಟವಾಯಿತು. 50 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ ಐದು ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳ ನೆರವಿನಿಂದ 70 ರನ್ ಗಳಿಸಿದರು. 

ವಿಲಿಯರ್ಸ್ ಹಾಗೂ ಪಡಿಕ್ಕಲ್ ವಿಕೆಟ್‌ಗಳನ್ನು ಕಬಳಿಸಿದ ಶಾರ್ದೂಲ್ ಠಾಕೂರ್ ಡಬಲ್ ಆಘಾತ ನೀಡಿದರು. ಚೊಚ್ಚಲ ಪಂದ್ಯ ಆಡುತ್ತಿರುವ ಟಿಮ್ ಡೇವಿಡ್ (1) ಪ್ರಭಾವಿ ಎನಿಸಿಕೊಳ್ಳಲಿಲ್ಲ. 

ಅಂತಿಮ ಹಂತದಲ್ಲಿ ನಿರಂತರ ಅಂತರಾಳದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಆರ್‌ಸಿಬಿಗೆ ಹಿನ್ನೆಡೆಯಾಗಿ ಪರಿಣಮಿಸಿತು. ಗ್ಲೆನ್ ಮ್ಯಾಕ್ಸ್‌ವೆಲ್ ಸಹ 11 ರನ್ ಗಳಿಸಿ ಔಟಾದರು. ಅಂತಿಮವಾಗಿ ಆರು ವಿಕೆಟ್ ನಷ್ಟಕ್ಕೆ 156 ರನ್ ಗಳಿಸಲಷ್ಟೇ ಸಾಧ್ಯವಾಯಿತು. 

16.4 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿದ್ದ ಆರ್‌ಸಿಬಿ, ನಂತರದ 16 ರನ್ ಗಳಿಸುವಷ್ಟರಲ್ಲಿ ಐದು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಇನ್ನುಳಿದಂತೆ ಹರ್ಷಲ್ ಪಟೇಲ್ (3) ಹಾಗೂ ವನಿಂದು ಹಸರಂಗ (1*) ರನ್ ಗಳಿಸಿದರು. 

ಚೆನ್ನೈ ಪರ ಡ್ವೇನ್ ಬ್ರಾವೊ ಮೂರು, ಶಾರ್ದೂಲ್ ಠಾಕೂರ್ ಎರಡು ಮತ್ತು ದೀಪಕ್ ಚಾಹರ್ ಒಂದು ವಿಕೆಟ್ ಪಡೆದು ಮಿಂಚಿದರು. 

ಚೆನ್ನೈ ಗೆಲುವಿಗೆ 157 ರನ್‌ಗಳ ಗುರಿ ಒಡ್ಡಿದ ಆರ್‌ಸಿಬಿ


ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಯಕ ವಿರಾಟ್ ಕೊಹ್ಲಿ (53) ಹಾಗೂ ದೇವದತ್ತ ಪಡಿಕ್ಕಲ್ (70) ಆಕರ್ಷಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 156 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ. 

ವಿಲಿಯರ್ಸ್, ಪಡಿಕ್ಕಲ್ ಪತನ

ಈ ನಡುವೆ ಎಬಿ ಡಿ ವಿಲಿಯರ್ಸ್ (12) ಹಾಗೂ ದೇವದತ್ತ ಪಡಿಕ್ಕಲ್ (70) ವಿಕೆಟ್ ನಷ್ಟವಾಯಿತು. ಈ ವೇಳೆಗೆ ಆರ್‌ಸಿಬಿ 3 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿತ್ತು. 

ರೋಹಿತ್ ದಾಖಲೆ ಮುರಿದ ಕೊಹ್ಲಿ

ಫಾರ್ಮ್‌ಗೆ ಮರಳಿದ ವಿರಾಟ್

ಎಬಿ ಡಿವಿಲಿಯರ್ಸ್ ಆರ್‌ಸಿಬಿ ಪರ 150ನೇ ಪಂದ್ಯ

ಮೊದಲ ವಿಕೆಟ್‌ಗೆ 111 ರನ್‌ಗಳ ಜೊತೆಯಾಟ

ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಮೊದಲ ವಿಕೆಟ್‌ಗೆ 13.2 ಓವರ್‌ಗಳಲ್ಲಿ 111 ರನ್‌ಗಳ ಜೊತೆಯಾಟ ನೀಡಿದರು. 41 ಎಸೆತಗಳನ್ನು ಎದುರಿಸಿದ ವಿರಾಟ್ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು.

ಕೊಹ್ಲಿ, ಪಡಿಕ್ಕಲ್ ಫಿಫ್ಟಿ ವೈಭವ

ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಬಿರುಸಿನ ಅರ್ಧಶತಕ ಗಳಿಸಿದ್ದು, 11 ಓವರ್‌ಗಳ ಅಂತ್ಯಕ್ಕೆ ಆರ್‌ಸಿಬಿ ವಿಕೆಟ್ ನಷ್ಟವಿಲ್ಲದೆ 111 ರನ್ ಗಳಿಸಿತ್ತು. 

5.3 ಓವರ್‌ಗಳಲ್ಲಿ ಫಿಫ್ಟಿ ಜೊತೆಯಾಟ

ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಬಿರುಸಿನ ಆಟದ ಮೂಲಕ ಗಮನ ಸೆಳೆದರು. ಪವರ್ ಪ್ಲೇ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 55 ರನ್ ಗಳಿಸಿತ್ತು. 

ಕೊಹ್ಲಿ-ಪಡಿಕ್ಕಲ್ ಬಿರುಸಿನ ಆಟ

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆರ್‌ಸಿಬಿ ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಉತ್ತಮ ಆರಂಭವೊದಗಿಸಿದರು. ಇನ್ನಿಂಗ್ಸ್‌ನ ಮೊದಲೆರಡು ಎಸೆತಗಳನ್ನು ಬೌಂಡರಿಗಟ್ಟಿದ ವಿರಾಟ್ ಗಮನ ಸೆಳೆದರು. ನಾಲ್ಕು ಓವರ್ ಅಂತ್ಯಕ್ಕೆ ಆರ್‌ಸಿಬಿ, ವಿಕೆಟ್ ನಷ್ಟವಿಲ್ಲದೆ 36 ರನ್ ಗಳಿಸಿತ್ತು.  

ಆರ್‌ಸಿಬಿ ತಂಡಕ್ಕೆ ಟಿಮ್ ಡೇವಿಡ್, ನವದೀಪ್ ಸೈನಿ ಆಯ್ಕೆ

ಟಾಸ್ ಗೆದ್ದ ಧೋನಿ ಫೀಲ್ಡಿಂಗ್ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. 

ಟಾಸ್ ಮತ್ತಷ್ಟು ವಿಳಂಬ

ಮರಳು ಬಿರುಗಾಳಿಯಿಂದಾಗಿ ಟಾಸ್ 10 ನಿಮಿಷ ವಿಳಂಬ

ಆರ್‌ಸಿಬಿಗೆ ವಿರಾಟ್, ವಿಲಿಯರ್ಸ್ ಬಲ

ಗೆಲುವಿನ ಲಯಕ್ಕೆ ಮರಳುವುದೇ ಆರ್‌ಸಿಬಿ?

ಮಹಿಗೆ ವಿರಾಟ್ ಸವಾಲು

ಪ್ಲೇ-ಆಫ್ ಸನಿಹದಲ್ಲಿ ಸಿಎಸ್‌ಕೆ

ಆರ್‌ಸಿಬಿ vs ಸಿಎಸ್‌ಕೆ

ಶಾರ್ಜಾ ಮೈದಾನದಲ್ಲಿರುವ ನಡೆಯಲಿರುವ ಪಂದ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.