ADVERTISEMENT

ಮೊದಲ ದಿನ 680 ಕ್ರೀಡಾಪಟುಗಳು ಭಾಗಿ

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ ಆರಂಭ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 16:53 IST
Last Updated 6 ಸೆಪ್ಟೆಂಬರ್ 2021, 16:53 IST
ರಾಜ್ಯ ಮಟ್ಟದ ಹಿರಿಯರ ಹಾಗೂ 23 ವರ್ಷದೊಳಗಿನ ಮಹಿಳೆಯರ ಹಾಗೂ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗೆ ಸೋಮವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ ಹಾಗೂ ಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಅಧ್ಯಕ್ಷ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು.
ರಾಜ್ಯ ಮಟ್ಟದ ಹಿರಿಯರ ಹಾಗೂ 23 ವರ್ಷದೊಳಗಿನ ಮಹಿಳೆಯರ ಹಾಗೂ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗೆ ಸೋಮವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ ಹಾಗೂ ಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಅಧ್ಯಕ್ಷ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು.   

ಉಡುಪಿ: ರಾಜ್ಯ ಮಟ್ಟದ ಹಿರಿಯರ ಹಾಗೂ 23 ವರ್ಷದೊಳಗಿನ ಮಹಿಳೆಯರ ಹಾಗೂ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ಗೆ ಸೋಮವಾರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ ಹಾಗೂಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಅಧ್ಯಕ್ಷ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು.

ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನಿಂದ ಆರಂಭವಾಗಿರುವ ಅಥ್ಲೆಟಿಕ್ಸ್‌ ಎರಡು ದಿನಗಳ ಕಾಲ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳ 680 ಕ್ರೀಡಾಪುಟಗಳು ಭಾಗವಹಿಸಿದ್ದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮಾಹೆ ಮಣಿಪಾಲ ಕುಲಪತಿ ಎಂ.ಡಿ ವೆಂಕಟೇಶ್, ಉಪ ಕುಲಾಧಿಪತಿಗಳಾದ ಎಚ್. ಎಸ್ ಬಲ್ಲಾಲ್, ಎನ್.ಇ.ಬಿ ಸ್ಪೋರ್ಟ್ಸ್ ಎಂಟರ್‌ಟೇನ್‌ಮೆಂಟ್‌ ಸಿಎಂಡಿ ನಾಗರಾಜ್ ಅಡಿಗ, ಕರ್ನಾಟಕ ರಾಜ್ಯ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ರಾಜವೇಲು, ರಾಷ್ಟ್ರೀಯ ಕ್ರೀಡಾಪಟು ಅಶ್ವಿನಿ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ, ಅಧ್ಯಕ್ಷರಾದ ಡಾ.ಕೆಂಪರಾಜ್, ಕೋಶಾಧಿಕಾರಿ ದೀಪಕ್ ರಾಮ್ ಬಾಯಾರಿ, ಕರ್ನಾಟಕ ಸ್ಟೇಟ್ ಮೀಟ್ ಸಂಘಟನಾ ಸಮಿತಿ ಕಾರ್ಯದರ್ ಮಹೇಶ್ ಠಾಕೂರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.