ADVERTISEMENT

₹ 10.31 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಸಿ.ಎಂ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 11:43 IST
Last Updated 25 ಜೂನ್ 2020, 11:43 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ₹ 10.31 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅನುಮೋದನೆ ನೀಡಿದರು.

ಪ್ರಾಧಿಕಾರದ ಸಭೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಪ್ರಾಧಿಕಾರಕ್ಕೆ ಜಿಲ್ಲಾವಾರು ಉಪ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಗಳ ರಚನೆಗೂ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಪ್ರವಾಸೋದ್ಯಮ ಸಿ.ಟಿ. ರವಿ ಸಭೆಯಲ್ಲಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.