ADVERTISEMENT

ನಿಖಿಲ್- ರೇವತಿ ಮದುವೆಗೆ ಕ್ಷಣಗಣನೆ: ಪಾಸು ಇದ್ದವರಿಗಷ್ಟೇ ಪ್ರವೇಶ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2020, 4:22 IST
Last Updated 17 ಏಪ್ರಿಲ್ 2020, 4:22 IST
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ರೇವತಿ ಅವರ ನಿಶ್ಚಿತಾರ್ಥ ಇತ್ತೀಚಿಗೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆದಿತ್ತು
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಹಾಗೂ ರೇವತಿ ಅವರ ನಿಶ್ಚಿತಾರ್ಥ ಇತ್ತೀಚಿಗೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆದಿತ್ತು   
""

ರಾಮನಗರ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮೊಮ್ಮಗ,ಚಿತ್ರನಟ ನಿಖಿಲ್- ರೇವತಿ ಕಲ್ಯಾಣಕ್ಕೆ ಬಿಡದಿ‌ ಬಳಿಯ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಕ್ಷಣಗಣನೆ ಆರಂಭವಾಗಿದೆ.

ವಧು-ವರರ ಕುಟುಂಬದ ಕೆಲ ಸದಸ್ಯರು ಈಗಾಗಲೇ ಆಗಮಿಸಿದ್ದಾರೆ. ಫಾರ್ಮ್ ಹೌಸ್‌ಗೆ ಅರ್ಧ ಕಿ.ಮೀ. ದೂರದಲ್ಲಿ ಇರುವ ಬೆಂಗಳೂರು- ಮೈಸೂರು ಹೆದ್ದಾರಿ ತಿರುವಿನಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಪಾಸ್ ಇದ್ದವರಿಗಷ್ಟೇ ಒಳಗೆ ಪ್ರವೇಶ ನೀಡಲಾಗುತ್ತಿದೆ. ಮಾಧ್ಯಮಗಳ ಪ್ರವೇಶವನ್ನೂ ನಿರ್ಬಂಧಿಸಲಾಗಿದೆ. ಬೆಳಗ್ಗೆ 9.15-9.45 ರ ನಡುವಿನ ಲಗ್ನದಲ್ಲಿ ವಿವಾಹ ನೆರವೇರಲಿದೆ.

ADVERTISEMENT
ಬೆಂಗಳೂರು- ಮೈಸೂರು ಹೆದ್ದಾರಿ ತಿರುವಿನಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ತಪಾಸಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.