ADVERTISEMENT

ರಾಘವೇಂದ್ರ ಸ್ವಾಮಿ ಮಠದಲ್ಲಿ ಕನಕಾಭಿಷೇಕ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2019, 17:28 IST
Last Updated 17 ಫೆಬ್ರುವರಿ 2019, 17:28 IST
ಭರತನಾಟ್ಯ
ಭರತನಾಟ್ಯ   

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ವಿಶೇಷ ಪೂಜೆ ನಡೆಯಿತು. ಮುಖ್ಯಪ್ರಾಣ ದೇವರಿಗೆ ಜೇನುತುಪ್ಪದಿಂದ ಮಧು ಅಭಿಷೇಕ, ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ, ಸುಮಧ್ವ ವಿಜಯ ಪಾರಾಯಣ ಹಾಗೂ ಪವಮಾನ ಹೋಮ, ಮಧ್ವಾಚಾರ್ಯರ ಭಾವಚಿತ್ರದೊಂದಿಗೆ ಸ್ವರ್ಣ ಲೇಪಿತ ಗಜವಾಹನದ ಮೆರವಣಿಗೆ, ಕನಕಾಭಿಷೇಕ ರಥೋತ್ಸವ ಮತ್ತು ಅನ್ನ ಸಂತರ್ಪಣೆ ಇತ್ತು.ಸಂಜೆ ’ಪ್ರಜ್ಞಾ ಶ್ರೀಧರ್‘ ವೃಂದದವರಿಂದ ಆರ್. ಕೆ ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ ಭರತನಾಟ್ಯ ಪ್ರದರ್ಶನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.