ADVERTISEMENT

ಸರೋಜಿನಿ ಮಹಿಷಿ ಸಮಿತಿಯ ವರದಿ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಬಳಕೆ ವರದಿಗಳನ್ನು ಜಾರಿಗೊಳಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2017, 13:32 IST
Last Updated 26 ನವೆಂಬರ್ 2017, 13:32 IST
ಸರೋಜಿನಿ ಮಹಿಷಿ ಸಮಿತಿಯ ವರದಿ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಬಳಕೆ ವರದಿಗಳನ್ನು ಜಾರಿಗೊಳಿಸಲು ಒತ್ತಾಯ
ಸರೋಜಿನಿ ಮಹಿಷಿ ಸಮಿತಿಯ ವರದಿ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಬಳಕೆ ವರದಿಗಳನ್ನು ಜಾರಿಗೊಳಿಸಲು ಒತ್ತಾಯ   

ಮೈಸೂರು: 83ನೇ ಅಖಿಲ ಭಾರತ ಸಮ್ಮೇಳನವು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಸಲ್ಲಿಸಿದ ವರದಿಗಳನ್ನು ಕೂಡಲೆ ಅನುಷ್ಠಾನಗೊಳಿಸಬೇಕು ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಯುಜಿಸಿ ಕೂಡಲೇ ಮಾನ್ಯತೆ ನೀಡಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅಧಿವೇಶನದಲ್ಲಿ ನಿರ್ಣಯಿಸಲಾಯಿತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿರುವ ಸರ್ಕಾರಿ ಶಾಲೆಗಳ ಸಬಲೀಕರಣ ವರದಿ, ಸರೋಜಿನಿ ಮಹಿಷಿ ಸಮಿತಿಯ ವರದಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಬಳಕೆ ವರದಿಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ಇದೇ ವೇಳೆ ಸಮ್ಮೇಳನ ಯಶಸ್ವಿಗೆ ಕಾರಣರಾದ ಸ್ವಾಗತ ಸಮಿತಿಗೆ, ಜನತೆಗೆ ಧನ್ಯವಾದ ಅರ್ಪಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.