ADVERTISEMENT

ಸಂಜೆ ವೇಳೆ ನಿದ್ದೆ ಮಾಡುವುದನ್ನು ತಪ್ಪಿಸಿ: ಯಾಕೆ ಗೊತ್ತಾ?

ಎಲ್.ವಿವೇಕಾನಂದ ಆಚಾರ್ಯ
Published 5 ಡಿಸೆಂಬರ್ 2025, 10:37 IST
Last Updated 5 ಡಿಸೆಂಬರ್ 2025, 10:37 IST
<div class="paragraphs"><p>ಚಿತ್ರ: ಗೆಟ್ಟಿ</p></div>
   

ಚಿತ್ರ: ಗೆಟ್ಟಿ

ಹಿಂದೂ ಸಂಪ್ರದಾಯದ ಪ್ರಕಾರ ಸಂಜೆ ಸಮಯದಲ್ಲಿ ನಿದ್ದೆ ಮಾಡುವುದು ಸೂಕ್ತವಲ್ಲ. ಸಂಜೆ ಸಮಯದಲ್ಲಿ ಲಕ್ಷ್ಮೀ ದೇವಿ ಮನೆಗೆ ಆಗಮಿಸುತ್ತಾಳೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಈ ಸಮಯದಲ್ಲಿ ನಿದ್ದೆ ಮಾಡಬಾರದು ಎಂಬ ನಂಬಿಕೆ ಇದೆ. ಈ ಪದ್ಧತಿ ಇಂದಿಗೂ ಚಾಲ್ತಿಯಲ್ಲಿದೆ. ಈ ಪದ್ದತಿಯ ಹಿಂದಿನ ಮಹತ್ವವೇನು ಎಂಬುದನ್ನು ನೋಡೋಣ. 

  • ಹಿಂದೂ ಸಾಂಪ್ರದಾಯದ ಪ್ರಕಾರ ಮುಸ್ಸಂಜೆ ದೀಪ ಹಚ್ಚಲು ಅತ್ಯಂತ ಪವಿತ್ರ ಸಮಯವಾಗಿದೆ. ಈ ವೇಳೆ ದೇವತೆಗಳು ಭೂಮಿಗೆ ಭೇಟಿ ನೀಡಿ ಮನೆಯ ಸದಸ್ಯರಿಗೆ ಆಶೀರ್ವಾದ ಮಾಡುತ್ತಾರೆ. ಆದ್ದರಿಂದ ಈ ಸಮಯದಲ್ಲಿ ನಿದ್ದೆ ಮಾಡುವುದು ಸೂಕ್ತವಲ್ಲವೆಂದು ಹೇಳಲಾಗುತ್ತದೆ.

    ADVERTISEMENT
  • ಸಂಜೆಯ ಸಮಯದಲ್ಲಿ ದುರ್ಗಾ, ಲಕ್ಷ್ಮೀ ಹಾಗೂ ಸರಸ್ವತಿ ಮನೆಯೊಳಗೆ ಪ್ರವೇಶಿಸಿ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ. ಈ ಸಮಯದಲ್ಲಿ ಮಕ್ಕಳು ಓದಿನತ್ತ ಗಮನ ಹರಿಸಬೇಕು. ಹಿರಿಯರು ಮಂತ್ರ ಪಠಿಸುವುದು ಭಕ್ತಿ ಗೀತೆಗಳನ್ನು ಕೇಳುವುದು ಹಾಗೂ ದೇವರ ಪೂಜೆ ಮಾಡುವುದರಿಂದ ದೇವತೆಗಳ ಆಶೀರ್ವಾದ ಲಭಿಸಿ ಸಕಲ ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆ ಇದೆ.

  • ಸಂಜೆ ವೇಳೆ ಮಲಗುವುದರಿಂದ ದಾರಿದ್ರ್ಯ ಬರುತ್ತದೆ ಎಂಬ ನಂಬಿಕೆ ಇದೆ. 

  • ಸಂಜೆ ವೇಳೆ ಮಲಗುವುದರಿಂದ ಜೀರ್ಣಾಂಗ ವ್ಯವಸ್ಥೆ ನಿಧಾನಗೊಂಡು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಇದರಿಂದ ರಾತ್ರಿಯ ನಿದ್ರಾಹೀನತೆ ಉಂಟಾಗಬಹುದು.

  • ಸಂಜೆ ವೇಳೆ ದೈಹಿಕ ಚಟುವಟಿ ಅಥವಾ ಕುಟುಂಬ, ಸ್ನೇಹಿತರೊಂದಿಗೆ ಮಾತನಾಡಿ ಸಮಯ ಕಳೆಯುವುದು ಉತ್ತಮ ಎಂದು ಹೇಳಲಾಗುತ್ತದೆ.

  • ಆಲಸ್ಯ ವ್ಯಕ್ತಿಯನ್ನು ಸೋಮಾರಿಯನ್ನಾಗಿಸುತ್ತದೆ. ಸಂಜೆ ಮಲಗುವುದರಿಂದ ಆಲಸ್ಯ ಮತ್ತು ತಾಮಸಿಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. 

ಆದ್ದರಿಂದ ಹಿರಿಯರು ಸಂಜೆ ಸಮಯದಲ್ಲಿ ಮನೆಯೊಳಗೆ ಮಲಗಬಾರದು ಎಂದು ಹೇಳುತ್ತಾರೆ. ಅಲ್ಲದೇ ಶಾಸ್ತ್ರಗಳೂ ಇದನ್ನೇ ಹೇಳುತ್ತವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.