ADVERTISEMENT

ಅದಮ್ಯ ಚೇತನ ಸಂಸ್ಥೆಗೆ ವಾಹನ ಕೊಡುಗೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 17:03 IST
Last Updated 16 ಮಾರ್ಚ್ 2018, 17:03 IST
ಎಸ್‍ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು, ಅದಮ್ಯ ಚೇತನ ಸ್ವಯಂಸೇವಾ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ತೇಜಸ್ವಿನಿ ಅನಂತಕುಮಾರ್ ಅವರಿಗೆ ವಾಹನದ ಕೀ ಹಸ್ತಾಂತರಿಸಿದರು.
ಎಸ್‍ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು, ಅದಮ್ಯ ಚೇತನ ಸ್ವಯಂಸೇವಾ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ತೇಜಸ್ವಿನಿ ಅನಂತಕುಮಾರ್ ಅವರಿಗೆ ವಾಹನದ ಕೀ ಹಸ್ತಾಂತರಿಸಿದರು.   

ಬೆಂಗಳೂರು: ಮಕ್ಕಳಿಗಾಗಿ ಮಧ್ಯಾಹ್ನದ ಬಿಸಿಯೂಟ ವಿತರಿಸಲು ಅದಮ್ಯ ಚೇತನ ಸ್ವಯಂಸೇವಾ ಸಂಸ್ಥೆಗೆ  ₹ 18 ಲಕ್ಷ ವೆಚ್ಚದ ವಾಹನವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)  ಕೊಡುಗೆ ನೀಡಿದೆ.

ಶುಕ್ರವಾರ ಇಲ್ಲಿ ನಡೆದ ಸಮಾರಂಭದಲ್ಲಿ ಎಸ್‍ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು ವಾಹನವನ್ನು ಹಸ್ತಾಂತರಿಸಿದರು.

‘ಮಕ್ಕಳಿಗೆ ಗುಣಮಟ್ಟ ಮತ್ತು ಪೌಷ್ಟಿಕ ಊಟ ಒದಗಿಸಲು ಎಸ್‌ಬಿಐ ಈ ನೆರವಿನ ಹಸ್ತ ಚಾಚಿದೆ’ ಎಂದು ರಜನೀಶ್‌ ಕುಮಾರ್‌ ಹೇಳಿದರು.

ADVERTISEMENT

ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ಬೆಂಗಳೂರು ಪ್ರಾದೇಶಿಕ ಪ್ರಧಾನ ಕಚೇರಿಯ ಚೀಫ್ ಜನರಲ್ ಮ್ಯಾನೇಜರ್ ಫಾರೂಕ್ ಷಹಾಬ್‌, ಅದಮ್ಯ ಚೇತನ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ತೇಜಸ್ವಿನಿ ಅನಂತಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.