ನವದೆಹಲಿ (ಐಎಎನ್ಎಸ್): ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ಹೊಸ ಆವಿಷ್ಕಾರಗಳನ್ನು ಪ್ರೋತ್ಸಾಹಿಸಲು ‘₨500 ಕೋಟಿ ಮೊತ್ತದ ಆವಿಷ್ಕಾರ ನಿಧಿ’ ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ಆರ್ಥಿಕವಾಗಿ ಹಿಂದುಳಿದ ಜನತೆಗೆ ಮೂಲಸೌಕರ್ಯಗಳನ್ನು ಸುಲಭವಾಗಿ ಒದಗಿಸಲು ಇಂತಹ ಅವಿಷ್ಕಾರಗಳ ಅಗತ್ಯ ಇದೆ. ತಳಮಟ್ಟದಿಂದಲೇ ಇದನ್ನು ಪ್ರೋತ್ಸಾಹಿಸಲಾಗುವುದು ಎಂದು ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮ ಸಚಿವ ಕೆ.ಎಚ್. ಮುನಿಯಪ್ಪ ಬುಧವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.