ADVERTISEMENT

ಇಂದಿನಿಂದ ಆರ್ಥಿಕ ಸಾಕ್ಷರತೆ

ಪಿಟಿಐ
Published 3 ಜೂನ್ 2018, 19:30 IST
Last Updated 3 ಜೂನ್ 2018, 19:30 IST
ಇಂದಿನಿಂದ ಆರ್ಥಿಕ ಸಾಕ್ಷರತೆ
ಇಂದಿನಿಂದ ಆರ್ಥಿಕ ಸಾಕ್ಷರತೆ   

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸೋಮವಾರದಿಂದ ಒಂದು ವಾರದವರೆಗೆ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಂಡಿದೆ.

‘ಗ್ರಾಹಕ ಹಿತರಕ್ಷಣೆ’ ವಿಷಯದ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವುದಾಗಿ ಹೇಳಿದೆ.

ಜೂನ್‌ 8 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಹಣಕಾಸು ಉತ್ಪನ್ನಗಳು ಮತ್ತು ಸೇವೆಗಳು, ಉತ್ತಮ ಹಣಕಾಸು ಯೋಜನೆಗಳು ಮತ್ತು ಡಿಜಿಟಲ್‌ ವಹಿವಾಟಿನ ಬಗ್ಗೆ ಬ್ಯಾಂಕಿಂಗ್‌ ಗ್ರಾಹಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.