ADVERTISEMENT

ಉತ್ಪಾದನೆಗೆ ಒತ್ತು: ಗೋಕರ್ಣ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2012, 19:30 IST
Last Updated 11 ಫೆಬ್ರುವರಿ 2012, 19:30 IST

ನವದೆಹಲಿ (ಪಿಟಿಐ): ಆಹಾರ ಹಣದುಬ್ಬರಕ್ಕೆ ಸರಕುಗಳ ಬೇಡಿಕೆ ಮತ್ತು ಪೂರೈಕೆಯಲ್ಲಿನ ಅಸಮಾನತೆಯೇ ಮುಖ್ಯ ಕಾರಣ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಡೆಪ್ಯುಟಿ ಗವರ್ನರ್ ಸುಬೀರ್ ಗೋಕರ್ಣ ಅಭಿಪ್ರಾಯಪಟ್ಟಿದ್ದಾರೆ.

   ಅದರಲ್ಲೂ ಪ್ರೋಟಿನ್ ಆಧಾರಿತ ಸರಕುಗಳಿಗೆ ಬಳಕೆದಾರರಲ್ಲಿ ಬೇಡಿಕೆ ಹೆಚ್ಚುತ್ತಿರುವುದರಿಂದ ಇಂತಹ ಸರಕುಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದರು. ಇಲ್ಲಿ ನಡೆದ  ಹೂಡಿಕೆದಾರರ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ಆರ್ಥಿಕ ವೃದ್ಧಿ ದರಕ್ಕೆ ಮೊದಲ ಆದ್ಯತೆ ನೀಡಿ, ವರಮಾನ ವೃದ್ಧಿ ನಿರ್ಲಕ್ಷಿಸುವಂತಿಲ್ಲ. ಇವೆರಡು ಪರಸ್ಪರ ತಳಕು ಹಾಕಿಕೊಂಡಿವೆ. ಎರಡಕ್ಕೂ ಸಮಾನ  ಮಹತ್ವ ನೀಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.