ನವದೆಹಲಿ (ಪಿಟಿಐ): ವಿದೇಶಿ ಬ್ಯಾಂಕ್ಗಳಲ್ಲಿ ಕಾನೂನು ಬಾಹಿರವಾಗಿ ಠೇವಣಿ ಇರಿಸಿರುವ ಕಪ್ಪು ಹಣವನ್ನು ಮರಳಿ ಸ್ವದೇಶಕ್ಕೆ ತರಲು ಸರ್ಕಾರ `ಕ್ಷಮಾದಾನ~ ಯೋಜನೆ ಜಾರಿಗೆ ತರಬೇಕು ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಅಸೋಚಾಂ) ಸಲಹೆ ನೀಡಿದೆ.
ವಿದೇಶಗಳಲ್ಲಿ ಇರಿಸಿರುವ ತೆರಿಗೆ ತಪ್ಪಿಸಿದ ಕಪ್ಪು ಹಣ ಮರಳಿ ತರಲು 6 ತಿಂಗಳ ಕ್ಷಮಾದಾನ ಯೋಜನೆ ಪ್ರಕಟಿಸಬೇಕು. ಕಪ್ಪು ಹಣದ ವಿವರ ನೀಡುವವರಿಗೆ ಶೇ 40ರಷ್ಟು ತೆರಿಗೆ ವಿಧಿಸಬೇಕು ಎಂದು `ಅಸೋಚಾಂ~ , ಕಪ್ಪು ಹಣದ ಬಗ್ಗೆ ನಡೆಸಿದ ಅಧ್ಯಯನ ವರದಿಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.