ಮಂಗಳೂರು: ಉಳಿತಾಯ ಖಾತೆ ಬಡ್ಡಿ ದರದ ಮೇಲಿನ ನಿಯಂತ್ರಣವನ್ನು ರಿಸರ್ವ್ ಬ್ಯಾಂಕ್ ಮುಕ್ತಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ಣಾಟಕ ಬ್ಯಾಂಕ್ ತಕ್ಷಣದಿಂದ ಜಾರಿಗೆ ಬರುವಂತೆ ಉಳಿತಾಯ ಖಾತೆಯ ಬಡ್ಡಿ ದರವನ್ನು ಶೇ 5ಕ್ಕೆ ಏರಿಸಿದೆ.
ಬ್ಯಾಂಕ್ನ ಈ ಕ್ರಮ ಎಲ್ಲಾ ಗ್ರಾಹಕರಿಗೂ ಲಭ್ಯವಾಗಲಿದ್ದು, ಪ್ರತಿದಿನದ ಉಳಿತಾಯಕ್ಕೂ ಬಡ್ಡಿ ಲೆಕ್ಕ ಹಾಕಲಾಗುತ್ತದೆ. ಆರು ತಿಂಗಳ ಬದಲಿಗೆ ಮೂರು ತಿಂಗಳಿಗೇ ಖಾತೆಗೆ ಬಡ್ಡಿ ಜಮಾ ಮಾಡಲಾಗುತ್ತದೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.