ನವದೆಹಲಿ: ಚಂದಾ ಕೊಚ್ಚರ್ ಅವರು ಐಸಿಐಸಿಐ ಬ್ಯಾಂಕ್ನ ಸಿಇಒ ಆಗಿ ಮುಂದುವರೆಯುವುದನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಲಿದೆ.
ಖಾಸಗಿ ವಲಯದ ಬ್ಯಾಂಕ್ನ ವ್ಯವಹಾರಗಳಲ್ಲಿ ತಲೆ ಹಾಕುವುದು ತನ್ನ ಕೆಲಸವಲ್ಲ ಎಂದು ಹಣಕಾಸು ಸಚಿವಾಲಯ ನಿರ್ಧರಿಸಿದೆ. ಬ್ಯಾಂಕಿಂಗ್ ನಿಯಂತ್ರಣ ಸಂಸ್ಥೆಯಾಗಿರುವ ಆರ್ಬಿಐ ಮತ್ತು ಬ್ಯಾಂಕ್ನ ನಿರ್ದೇಶಕ ಮಂಡಳಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.
ಚಂದಾ ಅವರ ವಿರುದ್ಧ ಕೇಳಿ ಬಂದಿರುವ ಸ್ವಜನಪಕ್ಷಪಾತ ಧೋರಣೆಯು, ಬ್ಯಾಂಕ್ನ ಕಾರ್ಪೊರೇಟ್ ಆಡಳಿತ ಪಾಲನೆ ಬಗ್ಗೆ ಅನುಮಾನ ಮೂಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.