ADVERTISEMENT

ಜಾರ್ಜಿಯಾ ರಾಜ್ಯ ಸರ್ಕಾರಕ್ಕೆ ಸಿ.ಎಂ ಆಹ್ವಾನ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2011, 19:30 IST
Last Updated 11 ಏಪ್ರಿಲ್ 2011, 19:30 IST

ಬೆಂಗಳೂರು: ರಾಜ್ಯ ಸರ್ಕಾರವು 2012ರ ಜೂನ್‌ನಲ್ಲಿ ಆಯೋಜಿಸುವ ವಿಶ್ವ ಹೂಡಿಕೆದಾರರ ಸಮಾವೇಶದಲ್ಲಿ ಸಹಭಾಗಿತ್ವ ವಹಿಸುವಂತೆ ಕೋರಿ ಅಮೆರಿಕದ ಜಾರ್ಜಿಯಾ ರಾಜ್ಯ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ.

ಏಪ್ರಿಲ್ 5ರಂದು ಜಾರ್ಜಿಯಾ ರಾಜ್ಯದ ಗವರ್ನರ್ ನಥಾನ್ ಡಿಯಲ್ ಅವರಿಗೆ ಪತ್ರ ಬರೆದಿರುವ ಅವರು, 2012ರ ವಿಶ್ವ ಹೂಡಿಕೆದಾರರ ಸಮಾವೇಶದ ಸಹಭಾಗಿತ್ವ ವಹಿಸಿ, ಪ್ರಯೋಜನೆ ಪಡೆಯುವಂತೆ ಮನವಿ ಮಾಡಿದ್ದಾರೆ. ಸಮಾವೇಶಕ್ಕೆ ಅಧಿಕೃತ ನಿಯೋಗಕರೆತರುವಂತೆಯೂ ಕೋರಿದ್ದಾರೆ.

ಜಾರ್ಜಿಯಾದ ಆರ್ಥಿಕ ಅಭಿವೃದ್ಧಿ ಇಲಾಖೆಯ ಮುಖ್ಯ ನಿರ್ವಹಣಾ ಅಧಿಕಾರಿ ಪಜೆಟ್ ವಿಲ್ಸನ್ ನೇತೃತ್ವದ ನಿಯೋಗ ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿ ಚರ್ಚಿಸಿರುವುದಕ್ಕೆ ಪೂರಕವಾಗಿ ಯಡಿಯೂರಪ್ಪ ಈ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.