ADVERTISEMENT

ಜಿಎಎಆರ್ಗೆ ಹೊಸ ಮಾರ್ಗಸೂಚಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2012, 19:30 IST
Last Updated 13 ಜುಲೈ 2012, 19:30 IST

ನವದೆಹಲಿ (ಪಿಟಿಐ): ತೆರಿಗೆ ತಪ್ಪಿಸುವ ಪ್ರವೃತ್ತಿ ತಡೆ ಸಾಮಾನ್ಯ ನಿಯಮಕ್ಕೆ (ಜಿಎಎಆರ್) ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಸಿದ್ದಪಡಿಸಿ ಸೆಪ್ಟೆಂಬರ್ 30ರೊಳಗೆ ಸಲ್ಲಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಾರ್ಥಸಾರಥಿ ಅಧ್ಯಕ್ಷತೆಯ ನಾಲ್ವರು ತಜ್ಞರ ಸಮಿತಿಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಹಣಕಾಸು ಸಚಿವಾಲಯ `ಜಿಎಎಆರ್~ ಕರಡು ಪ್ರಕಟಿಸಿತ್ತು. ಆದರೆ, ಪ್ರಧಾನಿ ಗಮನಕ್ಕೆ ತಾರದೆ ಮಾರ್ಗಸೂಚಿ ಅಂತಿಮಗೊಳಿಸಲಾಗಿದೆ ಎಂದು ಪ್ರಧಾನಿ ಕಚೇರಿ ಆರೋಪಿಸಿತ್ತು. ಈ ನಿಟ್ಟಿನಲ್ಲಿ  ಕರಡು ಪ್ರಕಟಗೊಂಡ 15 ದಿನಗಳ ಒಳಗೆ ಹೊಸ ಮಾರ್ಗಸೂಚಿ ಸಿದ್ದಪಡಿಸುವಂತೆ ಸ್ವತಃ ಹಣಕಾಸು ಖಾತೆ ಉಸ್ತುವಾರಿ ವಹಿಸಿಕೊಂಡಿರುವ ಪ್ರಧಾನಿ ಸೂಚಿಸಿದ್ದಾರೆ. ಸಮಿತಿಯು ಹೂಡಿಕೆದಾರರನ್ನು ಸಂಪರ್ಕಿಸಿ, ವಿವಾದಿತ `ಜಿಎಎಆರ್~ ಗೆ ಸಂಬಂಧಿಸಿದಂತೆ ಮಾರ್ಗಸೂಚಿ ಅಂತಿಮಗೊಳಿಸಲಿದೆ~ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.