ನವದೆಹಲಿ (ಪಿಟಿಐ): 2ಜಿ ಹಗರಣಕ್ಕೆ ಸಂಬಂಧಿಸಿ ಪರವಾನಗಿ ರದ್ದುಗೊಂಡಿರುವ, ಆದರೆ ಯಾವುದೇ ಕ್ರಿಮಿನಲ್ ಆರೋಪ ಹೊಂದಿರದ ಟೆಲಿಕಾಂ ಕಂಪೆನಿಗಳಿಗೆ ಪರವಾನಗಿ ಶುಲ್ಕ ಹಿಂದಿರುಗಿಸಲು ಸರ್ಕಾರ ನಿರ್ಧರಿಸಿದೆ.
ಹಣಕಾಸು ಸಚಿವ ಪಿ. ಚಿದಂಬರಂ ಅವರ ನೇತೃತ್ವದಲ್ಲಿ ಸೋಮವಾರ ಸಭೆ ಸೇರಿದ್ದ ಸಚಿವರ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಎ. ರಾಜಾ ಟೆಲಿಕಾಂ ಸಚಿವರಾಗಿದ್ದ ಅವಧಿಯಲ್ಲಿ ಮಂಜೂರು ಮಾಡಲಾಗಿದ್ದ ಎಲ್ಲ ಪರವಾನಗಿಗಳನ್ನು ಸುಪ್ರೀಂಕೋರ್ಟ್ ಫೆಬ್ರುವರಿಯಲ್ಲಿ ರದ್ದುಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.