ನವದೆಹಲಿ (ಪಿಟಿಐ): ಹೆಚ್ಚಿನ ವಿದೇಶಿ ಬಂಡವಾಳ ಆಕರ್ಷಿಸಲು ದೇಶಾದ್ಯಂತ ಇರುವ ತೆರಿಗೆ ನೀತಿಗಳಲ್ಲಿ ಸಮನ್ವಯ ತರುವ ಅಗತ್ಯ ಇದೆ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಅಭಿಪ್ರಾಯಪಟ್ಟಿದ್ದಾರೆ.
ಅಂತರರಾಷ್ಟ್ರೀಯ ಹಣಕಾಸು ಸಂಘಟನೆಯ ಭಾರತೀಯ ಶಾಖೆ ಇಲ್ಲಿ ಆಯೋಜಿಸಿದ್ದ ತೆರಿಗೆ ಸಮ್ಮೇಳನದಲ್ಲಿ ಅವರು ಮಾತನಾಡಿದರು. ದೇಶದ ವಿತ್ತೀಯ ಕೊರತೆ ಹೆಚ್ಚಿರುವ ಹಿನೆಲೆಯಲ್ಲಿ ತೆರಿಗೆ ವರಮಾನ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.