ನವದೆಹಲಿ: ನಿಗದಿತ ಸಮಯದೊಳಗೆ ಆದಾಯ ತೆರಿಗೆ ಮರುಪಾವತಿ ಕೋರಿಕೆಗಳನ್ನು ಇತ್ಯರ್ಥಪಡಿಸಲು ವಿಶೇಷ ಘಟಕ ತೆರೆಯುವಂತೆ ಸಂಸದೀಯ ಸಲಹಾ ಸಮಿತಿ ತೆರಿಗೆ ಇಲಾಖೆಗೆ ಸಲಹೆ ನೀಡಿದೆ.
ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಗೆ ಈ ಸೂಚನೆ ನೀಡಿದ್ದು, ತೆರಿಗೆ ಮರುಪಾವತಿ ಕೋರಿಕೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸುವಂತೆ ಸೂಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಮಯ ಮಿತಿ ನಿಗದಿಪಡಿಸುವಂತೆಯೂ, ತಪ್ಪಿದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವಂತೆಯೂ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.