ADVERTISEMENT

ತೆರಿಗೆ ವರಮಾನ ಹಂಚಿಕೆ ಸೂತ್ರ: ಪ್ರಧಾನಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2018, 19:30 IST
Last Updated 12 ಏಪ್ರಿಲ್ 2018, 19:30 IST
ತೆರಿಗೆ ವರಮಾನ ಹಂಚಿಕೆ  ಸೂತ್ರ: ಪ್ರಧಾನಿ  ಸ್ಪಷ್ಟನೆ
ತೆರಿಗೆ ವರಮಾನ ಹಂಚಿಕೆ ಸೂತ್ರ: ಪ್ರಧಾನಿ ಸ್ಪಷ್ಟನೆ   

ಚೆನ್ನೈ: ‘ತೆರಿಗೆ ವರಮಾನ ಹಂಚಿಕೆಯಲ್ಲಿ ಕೆಲ ರಾಜ್ಯಗಳಿಗೆ ಅನ್ಯಾಯವಾಗುವ ರೀತಿಯಲ್ಲಿ ಶಿಫಾರಸು ನೀಡಲು ಕೇಂದ್ರ ಸರ್ಕಾರವು ಹದಿನೈದನೇ ಹಣಕಾಸು ಆಯೋಗಕ್ಕೆ ಸೂಚಿಸಿದೆ ಎನ್ನುವ ಆರೋಪ ಅಸಂಬದ್ಧ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

‘ಜನಸಂಖ್ಯೆ ನಿಯಂತ್ರಣದಲ್ಲಿ ಉತ್ತಮ ಪ್ರಗತಿ ದಾಖಲಿಸಿರುವ ರಾಜ್ಯಗಳಿಗೆ ಉತ್ತೇಜನ ನೀಡುವ ರೀತಿಯಲ್ಲಿಯೇ ತೆರಿಗೆ ವರಮಾನ ಹಂಚಿಕೆ ಸೂತ್ರ ಸಿದ್ಧಪಡಿಸಲು ಸಲಹೆ ನೀಡಲಾಗಿದೆ’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ಇಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ADVERTISEMENT

ಕೆಲ ಸ್ಥಾಪಿತ ಹಿತಾಸಕ್ತಿಗಳು ದುರುದ್ದೇಶದಿಂದ ಈ ವಿಷಯ ಪ್ರಸ್ತಾಪಿಸಿವೆ ಎಂದು ಅವರು ಯಾರ ಹೆಸರನ್ನೂ ಉಲ್ಲೇಖಿಸದೆ ಹೇಳಿದರು.

ದಕ್ಷಿಣದ ಮೂರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಗಳ ಹಣಕಾಸು ಸಚಿವರು ಮಂಗಳವಾರ  ತಿರುವನಂತಪುರದಲ್ಲಿ ಸಭೆ ನಡೆಸಿ ಕೇಂದ್ರದ ಪ್ರಸ್ತಾವಿತ ಸಲಹೆಯನ್ನು ತೀವ್ರವಾಗಿ ವಿರೋಧಿಸಿದ್ದವು.

ಸಭೆಗೆ ಗೈರುಹಾಜರಾಗಿದ್ದ ತಮಿಳುನಾಡು ಬುಧವಾರ, ಇತರ ರಾಜ್ಯಗಳ ನಿಲುವಿಗೆ ಸಹಮತ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.