ನವದೆಹಲಿ: ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ಮಹಿಳಾ ಘಟಕದ ವಾರ್ಷಿಕ ಮಹಾಸಭೆಯಿಂದ ಐಸಿಐಸಿಐ ಬ್ಯಾಂಕ್ನ ಸಿಇಒ ಚಂದಾ ಕೊಚ್ಚರ್ ಅವರು ಹಿಂದೆ ಸರಿದಿದ್ದಾರೆ.
ಇದೇ 5ರಂದು ನಡೆಯಲಿರುವ ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಗುತ್ತಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹತ್ತು ಮಂದಿ ಸನ್ಮಾನಿತರ ಪಟ್ಟಿಯಲ್ಲಿ ಅವರ ಹೆಸರೂ ಇತ್ತು. ಸಮಾರಂಭದ ಪರಿಷ್ಕೃತ ಆಹ್ವಾನ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ.
‘ಅವರನ್ನು ಅತಿಥಿಗಳನ್ನಾಗಿ ಆಹ್ವಾನಿಸಲಾಗಿತ್ತು. ಸನ್ಮಾನಿತರ ಪಟ್ಟಿಯಲ್ಲಿ ಅವರ ಹೆಸರೂ ಇತ್ತು. ಸಮಾರಂಭದಿಂದ ಹಿಂದೆ ಸರಿದಿರುವುದು ಅವರ ಸ್ವಂತ ನಿರ್ಧಾರ. ಕಚೇರಿಯಿಂದ ಬಂದ ದೂರವಾಣಿ ಕರೆಯು, ಚಂದಾ ಕೊಚ್ಚರ್ ಸಮಾರಂಭಕ್ಕೆ ಬರಲಾಗದಿರುವುದನ್ನು ತಿಳಿಸಿತ್ತು. ಹೀಗಾಗಿ ಆಹ್ವಾನಿತರ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ’ ಎಂದು ಫಿಕ್ಕಿ ಮಹಿಳಾ ಘಟಕದ ಕಾರ್ಯನಿರ್ವಾಹಕ ನಿರ್ದೇಶಕಿ ರಷ್ಮಿ ಸರಿತಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.