ADVERTISEMENT

ಭಾರಜಲ ಖರೀದಿಗೆ ಒಪ್ಪಂದ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2018, 19:30 IST
Last Updated 4 ಏಪ್ರಿಲ್ 2018, 19:30 IST

ಬೆಂಗಳೂರು: ಭಾರಜಲ ಪೂರೈಕೆ ಉದ್ದೇಶಕ್ಕೆ ಭಾರ ಜಲ ಮಂಡಳಿ, ಅಣು ಇಂಧನ ಇಲಾಖೆ ಮತ್ತು ಕೇಂದ್ರ ಸರ್ಕಾರ ಬೆಂಗಳೂರಿನ ನವೋದ್ಯಮ ಎಸ್‍ವೈಎನ್‍ಎಂಆರ್ ಕೆಮಿಕಲ್ಸ್ ಜತೆ 10 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿವೆ.

ಎಸ್‍ವೈಎನ್‍ಎಂಆರ್ ಕೆಮಿಕಲ್ಸ್, ಸ್ಟಾರ್ಟ್‌ಅಪ್ ಕಂಪನಿಯಾಗಿದ್ದು, ಸಂಶೋಧನೆ ಮತ್ತು  ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ.

ಕೇಂದ್ರ ಸರ್ಕಾರದ ‘ಭಾರತದಲ್ಲಿಯೇ ತಯಾರಿಸಿ’ ಕಾರ್ಯಕ್ರಮದ ಭಾಗವಾಗುತ್ತಿರುವುದು ನಮಗೆ ಸಂತಸ ತಂದಿದೆ. ಇದರಿಂದ ವಿದೇಶಗಳ ಮೇಲಿನ ಅವಲಂಬನೆ ತಪ್ಪಲಿದ್ದು, ವಿದೇಶಿ ವಿನಿಮಯದಲ್ಲೂ ಉಳಿತಾಯ ಆಗಲಿದೆ ಎಂದು ಸಂಸ್ಥೆಯ ಸಿಇಒ ಡಾ.ಶಂಕರ್ ಅಯ್ಯರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.