ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರದ 2011-12ನೇ ಸಾಲಿನ ಮುಂಗಡ ಪತ್ರವನ್ನು ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಮಂಡಿಸುವ ಸಾಧ್ಯತೆ ಇದೆ.
5 ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಮಾರ್ಚ್ 9ರವರೆಗೆ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ರಾಷ್ಟ್ರಪತಿಗಳ ಭಾಷಣವು ಮಾರ್ಚ್ 9ರ ನಂತರವೇ ನಡೆಯಲಿದೆ. ಹೀಗಾಗಿ ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಬಜೆಟ್ ಮಂಡಿಸುವ ಸಾಧ್ಯತೆ ಇದೆ ಎಂದು ಪ್ರಣವ್ ಮುಖರ್ಜಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.