ಬೆಂಗಳೂರು: ಮೂಲಸೌಲಭ್ಯ ಅಭಿವೃದ್ಧಿ ಉದ್ದೇಶದಿಂದ ರಾಜ್ಯ ಸರ್ಕಾರ ‘ಮೂಲಸೌಲಭ್ಯ ಯೋಜನೆಗಳ ಸಾರ್ವಜನಿಕ- ಖಾಸಗಿ ಸಹಭಾಗಿತ್ವ (ಪಿಪಿಪಿ) ನೀತಿ-2018’ ಸಿದ್ಧಪಡಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
‘ಪಿಪಿಪಿ ಯೋಜನೆಗಳಿಗೆ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಯ ಅನುಮೋದನೆ ಮಿತಿ ₹ 50 ಕೋಟಿಯಿಂದ ₹ 500 ಕೋಟಿಗೆ ಹೆಚ್ಚಿಸಲಾಗುವುದು. ಕರ್ನಾಟಕ ಮೂಲಸೌಲಭ್ಯ ಯೋಜನೆಗಳ ಅಭಿವೃದ್ಧಿ ನಿಧಿ, ರಾಷ್ಟ್ರೀಯ ಹೂಡಿಕೆ ಮತ್ತು ಮೂಲಸೌಲಭ್ಯ ನಿಧಿ ಮೂಲಕ ಹೊಸ ನಿಧಿ ಸಂಗ್ರಹ ವ್ಯವಸ್ಥೆ ಸ್ಥಾಪಿಸಲಾಗುವುದು. ಹಿಂದುಳಿದಿರುವ ಹೈದರಾಬಾದ್- ಕರ್ನಾಟಕ ಪ್ರದೇಶದಲ್ಲಿ ಪಿಪಿಪಿ ಮಾದರಿಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ವಿಶೇಷ ಒತ್ತು ನೀಡಿದೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.