ADVERTISEMENT

ಸುಸ್ಥಿರ ಪ್ರಗತಿ: ಮೊಂಟೆಕ್ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2012, 19:30 IST
Last Updated 15 ಅಕ್ಟೋಬರ್ 2012, 19:30 IST

ಮುಂಬೈ(ಪಿಟಿಐ): ಸುಧಾರಣೆ ಕ್ರಮಗಳಿಂದ ಆರ್ಥಿಕ ಪುನಶ್ಚೇತನ ಈಗ ವೇಗ ಪಡೆದುಕೊಂಡಿದ್ದು, ಮುಂದಿನ ಆರು ತಿಂಗಳಲ್ಲಿ ಇನ್ನಷ್ಟು `ಸುಸ್ಥಿರ~ ಪ್ರಗತಿ ನಿರೀಕ್ಷಿಸಬಹುದು ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಇಲ್ಲಿ ನಡೆದ ಅಂತರರಾಷ್ಟ್ರೀಯ ಬ್ಯಾಂಕಿಂಗ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸರ್ಕಾರ ಇತ್ತೀಚೆಗೆ ಕೈಗೊಂಡ ಆರ್ಥಿಕ ಸುಧಾರಣೆಗಳಿಂದ ಮುಖ್ಯವಾಗಿ ಹೂಡಿಕೆದಾರರಲ್ಲಿ ಆತ್ಮವಿಶ್ವಾಸ ಮರಳಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.