ಮುಂಬೈ(ಪಿಟಿಐ): ಸಹಾರಾ ಸಮೂಹದ ಮುಖ್ಯಸ್ಥ ಸುಬ್ರತಾ ರಾಯ್ ಶನಿವಾರ ಷೇರು ನಿಯಂತ್ರಣ ಮಂಡಳಿ(ಸೆಬಿ) ಎದುರು ಹಾಜರಾಗಿ ತಮ್ಮ ಸಮೂಹದ ಬ್ಯಾಂಕ್ ಖಾತೆಗಳು ಮತ್ತಿತರೆ ಸ್ಥಿರಾಸ್ತಿಗಳ ವಿಚಾರವಾಗಿ ವಿವರಣೆ ನೀಡಲಿದ್ದಾರೆ.
ಷೇರುದಾರರ ರೂ24,000 ಕೋಟಿ ಹಣ ವಾಪಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟಕ್ಕೆ ಸಿಲುಕಿರುವ ಸಹಾರಾ ಸಮೂಹದ ಬ್ಯಾಂಕ್ ಖಾತೆಗಳು ಮತ್ತು ಹಲವು ಸ್ಥಿರಾಸ್ತಿಗಳನ್ನು `ಸೆಬಿ' ಸದ್ಯ ಜಪ್ತಿ ಮಾಡಿಕೊಂಡಿದೆ. ಈ ಸಂಬಂಧ ಶನಿವಾರ ಪ್ರಾಥಮಿಕ ಹಂತದ ವಿಚಾರಣೆಯನ್ನು `ಸೆಬಿ' ಕೈಗೆತ್ತಿಕೊಳ್ಳಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.