ನವದೆಹಲಿ: ಫ್ಲಿಪ್ಕಾರ್ಟ್ ಸ್ವಾಧೀನ ಒಪ್ಪಂದಕ್ಕೆ ಸಮ್ಮತಿ ನೀಡಬೇಕು ಎಂದು ವಾಲ್ಮಾರ್ಟ್ ಇಂಡಿಯಾ ಮತ್ತು ಫ್ಲಿಪ್ಕಾರ್ಟ್ನ ಉನ್ನತ ಅಧಿಕಾರಿಗಳು ಭಾರತದ ಸ್ಪರ್ಧಾತ್ಮಕ ಆಯೋಗಕ್ಕೆ (ಸಿಸಿಐ) ಮನವಿ ಮಾಡಿಕೊಂಡಿದ್ದಾರೆ.
ಎರಡೂ ಸಂಸ್ಥೆಗಳ ಉನ್ನತ ಅಧಿಕಾರಿಗಳು ಬುಧವಾರ ‘ಸಿಸಿಐ’ ಕಚೇರಿಗೆ ಭೇಟಿ ನೀಡಿ ಚರ್ಚಿಸಿರುವುದನ್ನು ಅಧಿಕೃತ ಮೂಲಗಳು ಖಚಿತಪಡಿಸಿಲ್ಲ. ಇದೊಂದು ಸೌಜನ್ಯದ ಭೇಟಿಯಾಗಿತ್ತಷ್ಟೆ ಎಂದು ಮೂಲಗಳು ತಿಳಿಸಿವೆ. ವಾಲ್ಮಾರ್ಟ್ ಇಂಡಿಯಾದ ಸಿಇಒ ಕ್ರಿಷ್ ಅಯ್ಯರ್ ಮತ್ತು ಫ್ಲಿಪ್ಕಾರ್ಟ್ನ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ ಅವರು ನಿಯೋಗದಲ್ಲಿ ಇದ್ದರು.
ಎರಡೂ ಸಂಸ್ಥೆಗಳ ವಹಿವಾಟು ಮತ್ತು ಕಾರ್ಯಕ್ರಮಗಳ ಬಗ್ಗೆ ನಿಯೋಗವು ‘ಸಿಸಿಐ’ಗೆ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.