
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣದ ತನಿಖೆ ಬಳಿಕ ತನ್ನ ವಿರುದ್ಧ ದಾಖಲಾದ ಪ್ರಕರಣವನ್ನು ಲೋಕ್ ಅದಾಲತ್ನಿಂದ ಇತ್ಯರ್ಥಪಡಿಸಲು ಸಿಬಿಐಗೆ ನಿರ್ದೇಶನ ನೀಡುವಂತೆ ಕೋರಿ ಲೂಪ್್ ಟೆಲಿಕಾಂ ಸಲ್ಲಿಸಿದ್ದ ಅರ್ಜಿ ಮೇಲಿನ ತೀರ್ಪನ್ನು ವಿಶೇಷ ಸಿಬಿಐ ಕೋರ್ಟ್ ಈ ತಿಂಗಳ 27ರಂದು ಪ್ರಕಟಿಸಲಿದೆ.
‘ಆದೇಶ ಇನ್ನೂ ಸಿದ್ಧವಾಗಿಲ್ಲ. ಮಾರ್ಚ್್ 27ರಂದು ಪ್ರಕಟಿಸಲಾಗುತ್ತದೆ’ ಎಂದು ವಿಶೇಷ ಸಿಬಿಐ ನ್ಯಾಯಾಧೀಶ ಒ.ಪಿ. ಸೈನಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.