ನವದೆಹಲಿ: ‘ಹೆಚ್ಚಿನ ಪ್ರಯಾಣಿಕರನ್ನು ಆಕರ್ಷಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ವಿಮಾನಗಳ ಬಿಸಿನೆಸ್ ಕ್ಲಾಸ್ ಪ್ರಯಾಣಿಕರ ಬಳಕೆಗೆ ಲ್ಯಾಪ್ಟಾಪ್ ನೀಡಲು ನಿರ್ಧರಿಸಲಾಗಿದೆ’ ಎಂದು ಏರ್ಇಂಡಿಯಾ ವಿಮಾನಯಾನ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ತಿಳಿಸಿದ್ದಾರೆ.
‘ಸದ್ಯಕ್ಕೆ ಬಿಸಿನೆಸ್ ಕ್ಲಾಸ್ನ ಅರ್ಧದಷ್ಟು ಆಸನಗಳು ಖಾಲಿ ಉಳಿಯುತ್ತಿವೆ. ಹೀಗಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಿಸಲು ಇರುವ ಮಾರ್ಗೋಪಾಯಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಗುಣಮಟ್ಟದ ಸೇವೆ, ಮನರಂಜನೆ ನೀಡುವ ಬಗ್ಗೆ ಆದ್ಯತೆ ನೀಡಲಾಗುವುದು’ ಎಂದು ಹೇಳಿದ್ದಾರೆ.
ಗುತ್ತಿಗೆ ಸಿಬ್ಬಂದಿ ವಜಾ: ನಷ್ಟದಲ್ಲಿಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 400ಕ್ಕೂ ಅಧಿಕ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದೆ.
ನಿವೃತ್ತಿ ಪಡೆದಿದ್ದ ಸಿಬ್ಬಂದಿಯನ್ನು ತಂತ್ರಜ್ಞಾನೇತರ ಕೆಲಸಗಳಿಗಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿತ್ತು. ಇದೀಗ ಖರೋಲಾ ಅವರ ನಿರ್ದೇಶನದಂತೆ ಆ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಸಂಸ್ಥೆಯ ವಕ್ತಾರ ಜಿ.ಪಿ. ರಾವ್ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.