ADVERTISEMENT

ಕಾಫಿ ಬೆಳೆಗಾರರ ಆದಾಯ 3 ಪಟ್ಟು ಹೆಚ್ಚಿಸಲು ಕ್ರಮ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 19:34 IST
Last Updated 18 ಜನವರಿ 2018, 19:34 IST
ಇಂಡಿಯಾ ಕಾಫಿ ಟ್ರಸ್ಟ್‌, ಕಾಫಿ ಮಂಡಳಿ ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಭಾರತ ಅಂತರರಾಷ್ಟ್ರೀಯ ಕಾಫಿ ಉತ್ಸವ- 2018’ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಚಾಮರಾಜ ನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಬುಡಕಟ್ಟು ಜನರಿಗೆ ವಿಶೇಷ ಕಾಫಿ ತಳಿಯ ಸಸ್ಯಗಳನ್ನು ವಿತರಿಸಿದರು. ಸಚಿವ ಕೃಷ್ಣಬೈರೇಗೌಡ, ಅಂತರಾಷ್ಟ್ರೀಯ ಕಾಫಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಜೋಸ್‌ ಡೋಸ್ಟರ್‌, ಭಾರತೀಯ ಕಾಫಿ ಮಂಡಳಿ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಇದ್ದರು  ಪ್ರಜಾವಾಣಿ ಚಿತ್ರ
ಇಂಡಿಯಾ ಕಾಫಿ ಟ್ರಸ್ಟ್‌, ಕಾಫಿ ಮಂಡಳಿ ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಭಾರತ ಅಂತರರಾಷ್ಟ್ರೀಯ ಕಾಫಿ ಉತ್ಸವ- 2018’ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಚಾಮರಾಜ ನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಬುಡಕಟ್ಟು ಜನರಿಗೆ ವಿಶೇಷ ಕಾಫಿ ತಳಿಯ ಸಸ್ಯಗಳನ್ನು ವಿತರಿಸಿದರು. ಸಚಿವ ಕೃಷ್ಣಬೈರೇಗೌಡ, ಅಂತರಾಷ್ಟ್ರೀಯ ಕಾಫಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಜೋಸ್‌ ಡೋಸ್ಟರ್‌, ಭಾರತೀಯ ಕಾಫಿ ಮಂಡಳಿ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಇದ್ದರು ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ವಿದೇಶದಲ್ಲಿ ನಮ್ಮ ದೇಶದ ಒಂದು ಕಪ್‌ ಕಾಫಿ ಬೆಲೆ ₹ 320 ಇದೆ. ಆದರೆ, ಇಲ್ಲಿ ಕಾಫಿ ಬೆಳೆಗಾರನಿಗೆ ಸಿಗುವ ದರ ಕೇವಲ ₹ 3’ ಎಂದು ಕಾಫಿ ಮಂಡಳಿ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಹೇಳಿದ್ದಾರೆ.

ಭಾರತ ಅಂತರರಾಷ್ಟ್ರೀಯ ಕಾಫಿ ಉತ್ಸವ–2018 ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಕಾಫಿ ಬೆಳೆಗಾರರ ಆದಾಯ 3 ಪಟ್ಟು ಹೆಚ್ಚಿಸಬೇಕು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಮ್ಮ ಕಾಫಿಗೆ ಉತ್ತಮ ಬ್ರ್ಯಾಂಡ್‌ ದೊರಕಿಸಲು ಪ್ರಯತ್ನ ನಡೆಸಿದ್ದೇವೆ’ ಎಂದರು.

‘ಬಿಳಿಗಿರಿ ರಂಗನಬೆಟ್ಟದಲ್ಲಿ ಸೋಲಿಗರು ಬೆಳೆಯುವ ಕಾಫಿಗೆ ಮಾರುಕಟ್ಟೆ ಒದಗಿಸಲು ಕ್ರಮ ತೆಗೆದುಕೊಳ್ಳ ಬೇಕು’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ಸಚಿವ ಕೃಷ್ಣ  ಬೈರೇಗೌಡ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.