ADVERTISEMENT

ಮಿಷನ್ ಮೋಡ್ ಈಗ ಚಾಲೆಂಜ್ ರೂಟ್ ಆಗಿದೆ: ಬಜೆಟ್‌ ಕುರಿತು ಮಲ್ಲಿಕಾರ್ಜುನ ಖರ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2026, 11:37 IST
Last Updated 1 ಫೆಬ್ರುವರಿ 2026, 11:37 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ನವದೆಹಲಿ: ದೇಶದ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸವಾಲುಗಳಿಗೆ ಪರಿಹಾರ ಒದಗಿಸದ ಬಜೆಟ್‌ ಇದಾಗಿದೆ ಎಂದು ಕೇಂದ್ರ ಬಜೆಟ್‌ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಯಾವುದೇ ದೂರದೃಷ್ಟಿ, ಇಚ್ಛಾಶಕ್ತಿ ಇಲ್ಲದ ಬಜೆಟ್‌ ಇದಾಗಿದೆ ಎಂದು ಕಿಡಿಕಾರಿದ್ದಾರೆ.

ADVERTISEMENT

ಮಿಷನ್ ಮೋಡ್ ಈಗ ಚಾಲೆಂಜ್ ರೂಟ್ ಆಗಿದೆ. ರಿಫಾರ್ಮ್ ಎಕ್ಸ್‌ಪ್ರೆಸ್‌ ಈಗ ಜಂಕ್ಷನ್‌ಗಳಲ್ಲಿ ನಿಲ್ಲುತ್ತಿದೆ. ಯಾವುದೇ ದೂರದೃಷ್ಟಿ, ರಾಜಕೀಯ ಇಚ್ಛಾಶಕ್ತಿ ಈ ಬಜೆಟ್‌ನಲ್ಲಿ ಇಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.

ರೈತರು ಆದಾಯ ಭದ್ರತಾ ಯೋಜನೆಗಳನ್ನು ನಿರೀಕ್ಷಿಸುತ್ತಿದ್ದರು. ಬಜೆಟ್‌ನಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಸೇರಿದಂತೆ ಯಾವ ಸಮುದಾಯಗಳಿಗೂ ಯಾವುದೇ ಬೆಂಬಲ ಒದಗಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಈ ಬಜೆಟ್‌ನಿಂದ ರಾಜ್ಯ ಸರ್ಕಾರಗಳಿಗೆ ಅನುಕೂಲ ಆದಂತೆ ಕಾಣುತ್ತಿಲ್ಲ. ಒಕ್ಕೂಟ ವ್ಯವಸ್ಥೆ ಬಲಿಪಶುವಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.

ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ 9ನೇ ಬಾರಿಗೆ ಬಜೆಟ್‌ ಮಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.