ನವದೆಹಲಿ: 2020–21ನೇ ಸಾಲಿನಲ್ಲಿ ಜಲ ಜೀವನ ಮಿಷನ್ಗಾಗಿ ₹11,500 ಕೋಟಿ ನಿಗದಿಪಡಿಸಲಾಗಿದೆ.
ಎಲ್ಲಾ ಮನೆಗಳಿಗೆ ನಲ್ಲಿ ಮೂಲಕ ನೀರು ಪೂರೈಕೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಉದ್ದೇಶಿಸಿದ್ದು ಕೆಂಪುಕೋಟೆಯಲ್ಲಿ ಭಾಷಣ ಮಾಡಿದಾಗ ಜಲ ಜೀವನ ಯೋಜನೆಯನ್ನು ಘೋಷಿಸಿದ್ದರು ಎಂದು ಸಚಿವೆ ನಿರ್ಮಲಾ ಹೇಳಿದರು.
‘ಈ ಯೋಜನೆಗಾಗಿ ನಮ್ಮ ಸರ್ಕಾರ ₹ 3.60 ಲಕ್ಷ ಕೋಟಿ ಹಣ ಮಂಜೂರು ಮಾಡಿದೆ. ಪ್ರಸಕ್ತ ಸಾಲಿನಲ್ಲಿ ಬಜೆಟ್ನಲ್ಲಿ ₹ 11,500 ಕೋಟಿ ಮೀಸಲಿಡಲಾಗಿದೆ’ ಎಂದು ಹೇಳಿದರು.
ಸ್ಥಳೀಯವಾಗಿ ಲಭ್ಯವಿರುವ ನೀರಿನ ಮೂಲಗಳನ್ನು ವೃದ್ಧಿಸುವುದು, ಈಗಿರುವ ನೀರಿನ ಮೂಲಗಳನ್ನು ಪುನಶ್ಚೇತನಗೊಳಿಸು
ವುದು ಮತ್ತು ಜಲ ಮರುಪೂರಣಗೊಳಿಸುವುದು ಈ ಯೋಜನೆಯ ಪ್ರಮುಖ ಅಂಶಗಳು.
ಹತ್ತು ಲಕ್ಷ ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ಈ ವರ್ಷದಿಂದಲೇ ಈ ಯೋಜನೆ ಜಾರಿಗೆ ಬರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.