ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2022–23 ಮಂಡಿಸಿದ್ದಾರೆ.
ಈ ಸಂದರ್ಭದಲ್ಲಿ ಅವರು ಮಹಾಭಾರತದ ಸಾಲೊಂದನ್ನು ಉಲ್ಲೇಖಿಸಿ, ಬಜೆಟ್ ಭಾಷಣ ಮಾಡಿದ್ದಾರೆ.
ಮಹಾಭಾರತದ ಶಾಂತಿ ಪರ್ವವನ್ನು ಉಲ್ಲೇಖಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಧರ್ಮದ ಹಾದಿಯಲ್ಲಿ ಸರ್ಕಾರವನ್ನು ನಡೆಸುವ ದೊರೆ, ಪ್ರಜೆಗಳ ಕಲ್ಯಾಣಕ್ಕಾಗಿ ವಿವಿಧ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ನಮ್ಮ ಪೂರ್ವಜರು ಹಾಕಿಕೊಟ್ಟಿರುವ ಹಾದಿಯಲ್ಲಿ ನಡೆದು, ಅವರ ಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಸಚಿವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.