ADVERTISEMENT

ಈ ಬಾರಿ ರೈತಪರ ಬಜೆಟ್: ಸುಳಿವು ಬಿಟ್ಟುಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 4:03 IST
Last Updated 5 ಮಾರ್ಚ್ 2020, 4:03 IST
ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)   

ಬೆಂಗಳೂರು: ‘ಸಕಾಲಕ್ಕೆ ಮಳೆಯಾಗಲಿ, ಉತ್ತಮ ಬೆಳೆ ಬರಲಿ, ರೈತರು ನೆಮ್ಮದಿಯಿಂದ ಬದುಕುವ ಪರಿಸ್ಥಿತಿ ರೂಪುಗೊಳ್ಳಲಿ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥನೆ ಸಲ್ಲಿಸಿದರು.

ಬೆಂಗಳೂರು ಮಲ್ಲೇಶ್ವರಂನ ಗಣಪತಿ ದೇಗುಲದಲ್ಲಿ ಬಜೆಟ್‌ ಇದ್ದ ಬ್ರೀಫ್‌ಕೇಸ್‌ಗೆ ಪೂಜೆ ಮಾಡಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ‘ಉತ್ತಮ ಬಜೆಟ್ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ’ ಎಂದರು.

‘ರೈತಪರವಾಗ ಬಜೆಟ್‌ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಪ್ರತಿಪಕ್ಷಗಳು ಸಹಕಾರ ಕೊಡಬೇಕು. ಬಜೆಟ್‌ ಮೇಲಿನ ಚರ್ಚೆಗೆ ಒಂದಿಡೀ ತಿಂಗಳು ಅವಕಾಶವಿದೆ. ಕೃಷಿಯ ಅಗತ್ಯಗಳನ್ನು ಪೂರೈಸಲು ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದೇನೆ’ ಎಂದು ಬಜೆಟ್‌ನ ಇಣುಕು ನೋಟ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.