ADVERTISEMENT

ಕನ್ನಡ ಭಾಷೆ,  ಸಂಸ್ಕೃತಿ, ಪರಂಪರೆಗೆ ರಾಜ್ಯ ಬಜೆಟ್‌ನಲ್ಲಿ ಸಿಕ್ಕಿದ್ದೇನು? 

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 10:25 IST
Last Updated 5 ಮಾರ್ಚ್ 2020, 10:25 IST
ಬಸವಣ್ಣ
ಬಸವಣ್ಣ    

ಬೆಂಗಳೂರು: ತಂತ್ರಜ್ಞಾನವನ್ನು ಕನ್ನಡಭಾಷೆಗೆ ಇನ್ನಷ್ಟು ಒಗ್ಗಿಸುವ ಮೂಲಕ ಕನ್ನಡ ಸಾಹಿತ್ಯ ಸಿರಿಯನ್ನು ಮುಂದಿನ ಪೀಳಿಗೆಗೆ ಉಣಬಡಿಸಲು ಸರ್ಕಾರ ಆದ್ಯತೆ ನೀಡಲಿದೆ ಎಂದು ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

* ಬಸವಕಲ್ಯಾಣದಲ್ಲಿ ₹500 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ. ಇದಕ್ಕಾಗಿ 2020- 21ನೇ ಸಾಲಿನಲ್ಲಿ ₹100 ಕೋಟಿ ಒದಗಿಸಲಾಗುವುದು.

* ಚಿತ್ರದುರ್ಗದ ಶ್ರೀ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ₹20 ಕೋಟಿ ನೆರವು.

ADVERTISEMENT

* ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ “ವಿಜ್ಞಾನೇಶ್ವರ ಅಧ್ಯಯನ ಪೀಠ” ಸ್ಥಾಪನೆ. ಇದಕ್ಕೆ ₹1 ಕೋಟಿ ವೆಚ್ಚ

* ಬೆಂಗಳೂರಿನಲ್ಲಿ ₹2 ಕೋಟಿ ವೆಚ್ಚದಲ್ಲಿ ವಿವೇಕಾನಂದ ಯುವ ಕೇಂದ್ರ ಸ್ಥಾಪನೆ.

* ರಾಜ್ಯದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ಮೂಲಭೂತ ಸೌಕರ್ಯಗಳನ್ನು ಬಲಪಡಿಸಲು, ಕ್ರೀಡಾಪಟುಗಳಿಗೆ ಉತ್ತಮ ತರಬೇತಿ, ಉತ್ತೇಜನ ನೀಡಲು, ತರಬೇತುದಾರರು ಮತ್ತು ತಾಂತ್ರಿಕ ಸಿಬ್ಬಂದಿಯ ಕೌಶಲ್ಯ ಅಭಿವೃದ್ಧಿಗೆ ₹5 ಕೋಟಿಗಳ ಅನುದಾನ.

* ಅನಂತ ಕುಮಾರ್ ಪ್ರತಿಷ್ಠಾನದ ವತಿಯಿಂದ ನಾಯಕತ್ವ ನಿರ್ಮಾಣ ಹಾಗೂ ನೀತಿ ನಿರೂಪಣಾ ಸಂಶೋಧನಾ ಸಂಸ್ಥೆ ಸ್ಥಾಪನೆಗೆ ₹20 ಕೋಟಿಅನುದಾನ. ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ಅನುದಾನ ಮೀಸಲು

* ಸರ್ಕಾರದ ವತಿಯಿಂದ ಜನವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆಗೆ ಕ್ರಮ.

* ಬೆಂಗಳೂರು ನಗರದ ನಾಲ್ಕೂ ದಿಕ್ಕಿನಲ್ಲಿ ₹60 ಕೋಟಿ ವೆಚ್ಚದಲ್ಲಿ ರವೀಂದ್ರ ಕಲಾಕ್ಷೇತ್ರದ ಮಾದರಿಯಲ್ಲಿ ಕಲಾಕ್ಷೇತ್ರಗಳ ನಿರ್ಮಾಣ.

* ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ ₹66 ಕೋಟಿವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 100 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ.

* ಸಂತ ಶಿಶುನಾಳ ಶರೀಫರ ಸಮಾಧಿಯಿರುವ ಹಾವೇರಿ ಜಿಲ್ಲೆ ಶಿಶುನಾಳ ಗ್ರಾಮ ಅಭಿವೃದ್ಧಿಗೆ ₹5ಕೋಟಿ ಅನುದಾನ.

* ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪನವರ ಚಿತ್ರದುರ್ಗದ ಮನೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ₹5 ಕೋಟಿ ಅನುದಾನ.

* ಖ್ಯಾತ ಸಾಹಿತಿ ಶ್ರೀ ಎಸ್. ಎಲ್. ಭೈರಪ್ಪನವರ ಹುಟ್ಟೂರು, ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದ ಅಭಿವೃದ್ಧಿಗೆ ₹5ಕೋಟಿ.

* ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸ್ಥಾಪನೆಗೆ ₹50 ಲಕ್ಷ ಅನುದಾನ

* ಚಿತ್ರಸಂತೆ ಕಾರ್ಯಕ್ರಮಕ್ಕೆ ₹1 ಕೋಟಿನೆರವು

* ಬೆಂಗಳೂರಿನಲ್ಲಿ ಒಟ್ಟು ₹500 ಕೋಟಿ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ಸ್ಥಾಪನೆ.

* ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ₹5 ಕೋಟಿ

* ವಿವಿಧ ಮಠಗಳ ಅಭಿವೃದ್ಧಿಗೆ ಆರ್ಥಿಕ ಸಹಾಯ ನೀಡಲು ಸರ್ಕಾರದ ಕ್ರಮ.

* ಭಾರತದ ವಿವಿಧ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಕರ್ನಾಟಕ ಸರ್ಕಾರವು ನಡೆಸುತ್ತಿರುವ ಅತಿಥಿಗೃಹಗಳ ಮೂಲಸೌಕರ್ಯ ಅಭಿವೃದ್ಧಿಗೆ ₹25 ಕೋಟಿ ಅನುದಾನ.

* ಹಾವೇರಿ ಜಿಲ್ಲೆಯಲ್ಲಿರುವ ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರೋತ್ಸಾಹ.

* ರಾಜ್ಯದ 60 ವರ್ಷ ಮೀರಿದ ಬಡವರಿಗೆ ಉಚಿತವಾಗಿ ರಾಜ್ಯದ ಹಾಗೂ ದೇಶದ ಪ್ರಸಿದ್ಧ ತೀರ್ಥ ಕ್ಷೇತ್ರ ದರ್ಶಿಸಲು “ಜೀವನ ಚೈತ್ರ ಯಾತ್ರೆ” ಯೋಜನೆ ಜಾರಿ; ₹20 ಕೋಟಿ ಅನುದಾನ.

* ರಾಜ್ಯದಲ್ಲಿರುವ 25,000ಕ್ಕೂ ಹೆಚ್ಚು ಐತಿಹಾಸಿಕ ಮಹತ್ವವುಳ್ಳ ದೇವಸ್ಥಾನಗಳು, ಪ್ರಾಚೀನ ಸ್ಥಳಗಳು, ಸ್ಮಾರಕಗಳ ಪುನರುಜ್ಜೀವನಕ್ಕೆ “ಸಂರಕ್ಷಣಾ” ಯೋಜನೆ ಜಾರಿ.

* ಪ್ರವಾಸಿ ಸ್ನೇಹಿ ಯೋಜನೆಗಳನ್ನು ಒಳಗೊಂಡ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ಕ್ರಮ.

* ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹20 ಕೋಟಿ ಅನುದಾನ.

* ವೀರ ಮದಕರಿ ನಾಯಕ ಹಾಗೂ ಒನಕೆ ಓಬವ್ವರ ನೆನಪಿಸುವ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಕ್ರಮ.

* ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯ ಸಮಗ್ರ ಅಭಿವೃದ್ಧಿಗೆ ₹25 ಕೋಟಿ ಅನುದಾನ.

* ಕರ್ನಾಟಕ ಪ್ರವಾಸೋದ್ಯಮ ಕಾರ್ಯಪಡೆಯ ಶಿಫಾರಸುಗಳಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕ್ರಮ. ಪ್ರವಾಸಿಗರನ್ನು ಸೆಳೆಯುವ ಜಾಹೀರಾತು ಮತ್ತು ಇತರ ಚಟುವಟಿಕೆಗಳಿಗೆ ₹100 ಕೋಟಿ ಹಾಗೂ ರಾಜ್ಯದ ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಗೆ ₹500 ಕೋಟಿ ರೂ. ಅನುದಾನ.

* ಪ್ರವಾಸಿ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸಲು “ಜಾಗತಿಕ ಪ್ರವಾಸೋದ್ಯಮ ಹೂಡಿಕೆದಾರರ ಸಮಾವೇಶ” (Global Tourism Investors Meet).

* ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಜಲಪಾತ ಮತ್ತು ಇತರ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಒದಗಿಸಿ, ಟೂರಿಸಂ ಸಕ್ರ್ಯೂಟ್ ಅಭಿವೃದ್ಧಿಗೆ ಕ್ರಮ.

* ರಾಜ್ಯದಲ್ಲಿರುವ ಶೋಲಾ ಅರಣ್ಯಗಳ ಸರ್ವೇಕ್ಷಣೆ, ಜೀವ ವೈವಿಧ್ಯ ಸಂರಕ್ಷಣೆಗೆ ₹5 ಕೋಟಿ ರೂ. ಅನುದಾನ

* ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಮಿನಿ ಮೃಗಾಲಯ ಉನ್ನತೀಕರಿಸಲು ಐದು ಕೋಟಿ ರೂ.ಗಳ ಅನುದಾನ

* ರಾಮನಗರ ಜಿಲ್ಲೆಯ ರಣಹದ್ದು ಧಾಮದಲ್ಲಿ ₹5 ಕೋಟಿಗಳ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ಸ್ಥಾಪನೆ.

* ಮಂಗಗಳ ಪುನರ್ವಸತಿಗೆ ಐದು ವರ್ಷಗಳಿಗೆ ಒಟ್ಟಾರೆ ₹6.25 ಕೋಟಿ ಅನುದಾನ. 2020-21ನೇ ಸಾಲಿನಲ್ಲಿ ₹1.25 ಕೋಟಿ ನೆರವು.

* ಉತ್ತರ ಕನ್ನಡ ಜಿಲ್ಲೆಯಲ್ಲಿ ₹1ಕೋಟಿ ವೆಚ್ಚದಲ್ಲಿ ರಾಜ್ಯದ ಮೊದಲ ಕಡಲಧಾಮವನ್ನು (Marine Eco Park) ಸ್ಥಾಪನೆ.

* ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ವಲಯಕ್ಕೆ ನಿಗದಿಪಡಿಸಿದ ಒಟ್ಟಾರೆ ಅನುದಾನ – ₹4552 ಕೋಟಿ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.