ಕೋವಿಡ್ ಮತ್ತು ಆರ್ಥಿಕ ಹಿಂಜರಿತದ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ 8ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಏನಿದೆ, ಯಾವ ಕ್ಷೇತ್ರಕ್ಕೆ ಏನು ಕೊಡುಗೆ ನೀಡಲಾಗಿದೆ, ಹೊಸ ಯೋಜನೆಗಳೇನಿವೆ? ಇಲ್ಲಿವೆ ಮುಖ್ಯಾಂಶಗಳು...
*ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ
*45 ಲಕ್ಷ ರೂ. ವರೆಗೆ ಫ್ಲ್ಯಾಟ್ ಖರೀದಿ ಮಾಡುವಾಗ ಮುದ್ರಾಂಕ ಶುಲ್ಕ ಪಾವತಿಯಿಲ್ಲ
*ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲು
*ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ₹500 ಕೋಟಿ ಅನುದಾನ
*ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು
ಬಜೆಟ್ ಲೈವ್:Live Updates| Karnataka Budget 2021: ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ
*2021-22ನೇ ಸಾಲಿನ ಬಜೆಟ್ ಗಾತ್ರ ₹2.5 ಲಕ್ಷ ಕೋಟಿ
*ರಾಜ್ಯದ ಜಿಎಸ್ಟಿ ಸಂಗ್ರಹದಲ್ಲಿ ಇಳಿಕೆ: ಯಡಿಯೂರಪ್ಪ
*ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಿ ನಿವಾಸ: ಬಿಎಸ್ವೈ ಘೋಷಣೆ
* ಕಿದ್ವಾಯಿ ಮಾದರಿಯ ಆಸ್ಪತ್ರೆಗೆ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ
*ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ 10ರಷ್ಟು ಮೀಸಲಾತಿ
*ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ
*ದೇಶೀಯ ಗೋ ಸಂಪತ್ತಿನ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್
*ನಂದಿ ದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ ಉತ್ಕೃಷ್ಟ ದರ್ಜೆಯ ಹೋತ ವಿತರಿಸಲು ₹1 ಕೋಟಿ ಅನುದಾನ
*ಪ್ರಧಾನ ಮಂತ್ರಿ ಮತ್ಸ್ಯ ಸಂಪ್ರದಾ ಯೋಜನೆಗೆ ₹62 ಕೋಟಿ
*ಮಹಿಳಾ ದಿನಕ್ಕೆ ಮಹಿಳೆಯರಿಗೆ ಹೆಚ್ಚಿನ ಸೌಕರ್ಯ: 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ
*ಉಪನಗರ ರೈಲು ಯೋಜನೆಗೆ2021-22ನೇ ಸಾಲಿಗೆ 850 ಕೋಟಿ
*ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ₹900 ಕೋಟಿ
*ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹7,795 ಕೋಟಿ ಅನುದಾನ
*ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತರ ರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್
*ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ
*ಬೆಂಗಳೂರು ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಪ್ರತಿ ವಾರಾಂತ್ಯದ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ₹2 ಕೋಟಿ
*ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಇನ್ನಷ್ಟು ಒಗ್ಗಿಸುವ ನಿಟ್ಟಿನಲ್ಲಿ ₹2 ಕೋಟಿ ಅನುದಾನ
*ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿ ವೆಚ್ಚದಲ್ಲಿ ಯೋಜನೆ
*ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ 50ಕ್ಕೆ ಹೆಚ್ಚಳ
*ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನಕ್ಕೆ 2021-22ನೇ ಸಾಲಿನಲ್ಲಿ ₹10 ಕೋಟಿ ಅನುದಾನ
*ಬೈಯಪ್ಪನಹಳ್ಳಿಯಲ್ಲಿ ₹50 ಕೋಟಿ ವೆಚ್ಚದ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ.
*ಆಯ್ದ 50 ಶಾಲೆಗಳ ಅಭಿವೃದ್ಧಿಗೆ ₹100 ಕೋಟಿ
*ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ₹150 ಕೋಟಿ ಅನುದಾನ
*ಸರ್ಕಾರಿ ಶಾಲೆಗಳಿಗೆ ಪೀಠೋಪಕರಣಗಳು ಮತ್ತು ಕಲಿಕಾ ಸಾಮಗ್ರಿಗಳ ವಿತರಣೆಗೆ ₹ 50 ಕೋಟಿ ಅನುದಾನ
*ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ನವೀಕರಣ ಮತ್ತು ದುರಸ್ತಿಗೆ ₹33 ಕೋಟಿ ಅನುದಾನ
*ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹7,795 ಕೋಟಿ ಅನುದಾನ
*ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ
* ಬಿಬಿಎಂಪಿಯ 57 ವಾರ್ಡ್ಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ
* ₹33 ಕೋಟಿ ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್ ನಿರ್ಮಾಣ.
* ಉತ್ತರ ಬೆಂಗಳೂರಿಗೆಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ
*ರಾಜ್ಯದ ಡೇಟಾ ಕೇಂದ್ರದ ಸೈಬರ್ ಸುರಕ್ಷತೆ ಬಲಪಡಿಸಲು ಸುಸಜ್ಜಿತ ಭದ್ರತಾ ಕಾರ್ಯಾಚರಣೆ ಕೇಂದ್ರದ ಸ್ಥಾಪನೆಗೆ ₹ 2 ಕೋಟಿ
*ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಹಕ್ಕು ದಾಖಲೆ ವಿತರಿಸುವ ‘ಸ್ವಾಮಿತ್ವ’ ಯೋಜನೆ ತ್ವರಿತ ಜಾರಿಗೆ ₹ 25 ಕೋಟಿ
*‘ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ’, ‘ಮನೆ ಬಾಗಿಲಿಗೇ ಮಾಸಾಶನ’ ಕಾರ್ಯಕ್ರಮಗಳಮುಂದುವರಿಕೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.