ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಚೊಚ್ಚಲ ಬಜೆಟ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನವಕರ್ನಾಟಕದಿಂದ ನವಭಾರತ ನಿರ್ಮಾಣ ಮಾಡಲು ಮುಖ್ಯಮಂತ್ರಿಗಳು ಉತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
‘ರಾಜ್ಯದ ಮೂಲಭೂತ ಸೌಲಭ್ಯ, ವಸತಿ, ಶಿಕ್ಷಣ, ಆರೋಗ್ಯ, ವಾಣಿಜ್ಯ, ಕೈಗಾರಿಕೆಗಳ ಅಭಿವೃದ್ಧಿಗೆ ಸಮರ್ಪಕ ಅನುದಾನಗಳನ್ನು ನೀಡಲಾಗಿದ್ದು, ಭವಿಷ್ಯದ ನಗರ, ಗ್ರಾಮಾಂತರ ಪ್ರದೇಶಗಳ ಏಳಿಗೆಗೆ ಮಾದರಿಯಾಗಿರುವ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ’ ಎಂದು ಟ್ವೀಟ್ನಲ್ಲಿ ಅವರು ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.