ADVERTISEMENT

ಬಿಜೆಪಿ ಸರ್ಕಾರ 2019ರಿಂದ ಏಕೆ ಮೌನವಾಗಿತ್ತು? - ರಣದೀಪ್ ಸಿಂಗ್ ಸುರ್ಜೇವಾಲ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮಾರ್ಚ್ 2022, 13:44 IST
Last Updated 4 ಮಾರ್ಚ್ 2022, 13:44 IST
ರಣದೀಪ್ ಸಿಂಗ್ ಸುರ್ಜೇವಾಲ
ರಣದೀಪ್ ಸಿಂಗ್ ಸುರ್ಜೇವಾಲ   

ಬೆಂಗಳೂರು: 2022-23ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೇಕೆದಾಟು ಯೋಜನೆಗೆ ₹1,000 ಕೋಟಿ ಅನುದಾನ ಘೋಷಿಸಿದ್ದಾರೆ. ಆದರೆ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವುದರಲ್ಲಿ ರಾಜ್ಯ ಸರ್ಕಾರದ ಬದ್ಧತೆ ಕೊರತೆಯನ್ನು ಎಐಸಿಸಿ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನಿಸಿದ್ದಾರೆ.

'ನಿನ್ನೆಯವರೆಗೂ ಬೊಮ್ಮಾಯಿ ಸರ್ಕಾರ ಮೇಕೆದಾಟು ಪಾದಯಾತ್ರೆಯನ್ನು ಲೇವಡಿ ಮಾಡಿತ್ತು. ಇಂದು ಅದಕ್ಕೆ ತದ್ವಿರುದ್ಧವಾಗಿ ಮೇಕೆದಾಟು ಯೋಜನೆಗೆ ₹1,000 ಕೋಟಿ ಕಾಯ್ದಿರಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂಟು ವರ್ಷಗಳಿಂದ ಅನುಮತಿ ನೀಡಿಲ್ಲ? ಬಿಜೆಪಿ ಸರ್ಕಾರವು 2019ರಿಂದ ಏಕೆ ಮೌನವಾಗಿತ್ತು' ಎಂದು ಟೀಕಿಸಿದ್ದಾರೆ.

ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಮೇಕೆದಾಟು ಯೋಜನೆ ಪ್ರಾರಂಭಿಸುವ ದಿನಾಂಕ ಹೇಳಿ ಎಂದು ತಿರುಗೇಟು ನೀಡಿದ್ದಾರೆ.

ADVERTISEMENT

'ಕಣ್ಕಟ್ಟು, ವಂಚನೆ, ಮೋಸದ ಮೂಲಕ ಮೇಕೆದಾಟು ಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ. ಪ್ರಾಮಾಣಿಕತೆ ಹಾಗೂ ದೃಢ ಸಂಕಲ್ಪವು ಪರಿಹಾರವಾಗಿದೆ. ಎಂದಿಗೂ ವಿನಿಯೋಗಿಸದ ಅನುದಾನವನ್ನು ಘೋಷಿಸುವುದೊಂದೇ ಪರಿಹಾರವಲ್ಲ. ಇದು ಹೆಡ್‌ಲೈನ್ ಗಿಟ್ಟಿಸುವ ತಂತ್ರವಾಗಿದೆ' ಎಂದು ಆರೋಪಿಸಿದ್ದಾರೆ.

ಇವನ್ನೂ ಓದಿ:
Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.