ADVERTISEMENT

Karnataka Budget: 26 ಹೋಬಳಿಗಳಲ್ಲಿ SC,ST ವಿದ್ಯಾರ್ಥಿಗಳಿಗೆ ವಸತಿ ಶಾಲೆ ಆರಂಭ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2025, 9:08 IST
Last Updated 7 ಮಾರ್ಚ್ 2025, 9:08 IST
   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಗೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ.

ಸಮಾಜ ಕಲ್ಯಾಣ

  • ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ 2025-26ನೇ ಸಾಲಿನಲ್ಲಿ ಒಟ್ಟಾರೆ ₹42,018 ಕೋಟಿ ಅನುದಾನ ನಿಗದಿ. ಪರಿಶಿಷ್ಟ ಜಾತಿ ಉಪಯೋಜನೆಗೆ ₹29,992 ಕೋಟಿ ಹಾಗೂ ಬುಡಕಟ್ಟು ಉಪಯೋಜನೆಗೆ ₹12,026 ಕೋಟಿ ಆಯವ್ಯಯ ನಿಗದಿ.

  • ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2A ಮತ್ತು 2B ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ ಪ್ರಸ್ತುತ ನೀಡಲಾಗುತ್ತಿರುವ ಮೀಸಲಾತಿ ₹2 ಕೋಟಿಗೆ ಹೆಚ್ಚಳ. ₹1 ಕೋಟಿ ವರೆಗಿನ ಸರಕು ಖರೀದಿ ಮತ್ತು ಸೇವೆಗಳನ್ನು ಪಡೆಯಲು ಸಹ ಈ ಮೀಸಲಾತಿ ಸೌಲಭ್ಯ ವಿಸ್ತರಣೆ.

    ADVERTISEMENT
  • ಪ್ರಗತಿ ಕಾಲೋನಿ ಯೋಜನೆಯಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ₹222 ಕೋಟಿ. ಅನುದಾನ.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಒಟ್ಟು 31 ವಸತಿ ಶಾಲೆಗಳನ್ನು ಪಿ.ಯು ಕಾಲೇಜನ್ನಾಗಿ ಉನ್ನತೀಕರಣ.

  • 26 ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಸತಿ ಶಾಲೆಗಳ ಪ್ರಾರಂಭ.

  • ಒಟ್ಟು 61 ಕ್ರೈಸ್‌ ವಸತಿ ಶಾಲೆಗಳಿಗೆ 1,292 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹಾಗೂ 213 ಕೋಟಿ ರೂ. ವೆಚ್ಚದಲ್ಲಿ ಕ್ರೈಸ್‌ ವಸತಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ.

  • 34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ.

  • ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26 ನೇ ಸಾಲಿನಲ್ಲಿ ₹488 ಕೋಟಿ ಅನುದಾನ ನಿಗದಿ.

  • ದೇಶದ ಪ್ರತಿಷ್ಠಿತ 100 ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಪ್ರೋತ್ಸಾಹಧನ.

  • ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್‌ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಅದೇ ಹಾಸ್ಟೆಲಿನಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮಾಸಿಕ ₹3,500 ನೆರವು.

ಪರಿಶಿಷ್ಟ ವರ್ಗಗಳ ಕಲ್ಯಾಣ

  • 78 ಬುಡಕಟ್ಟು ವಸತಿ ಶಾಲೆಗಳಲ್ಲಿ 7ನೇ ತರಗತಿ ಪ್ರಾರಂಭ. ಐದು ವಸತಿ ಶಾಲೆಗಳು 12ನೇ ತರಗತಿಯವರೆಗೆ ಮೇಲ್ದರ್ಜೆಗೆ.

  • ಪರಿಶಿಷ್ಟ ಪಂಗಡದ 20 ಹೊಸ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯ ಪ್ರಾರಂಭ.

  • ಲ್ಯಾಂಪ್ಸ್‌ (LAMPS) ಸಹಕಾರ ಸಂಘಗಳಿಗೆ ದುಡಿಯುವ ಬಂಡವಾಳ ರೂಪದಲ್ಲಿ ತಲಾ ₹5 ಲಕ್ಷ ಸಹಾಯಧನ

  • ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಮೂಲಸೌಕರ್ಯ ವಂಚಿತ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು ₹200 ಕೋಟಿ.

  • ರಾಜ್ಯ ಸಿವಿಲ್‌ ಸೇವೆಗಳಲ್ಲಿ ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ 13 ಬುಡಕಟ್ಟು ಜನಾಂಗಗಳ ಅಭ್ಯರ್ಥಿಗಳ ವಿಶೇಷ ನೇರ ನೇಮಕಾತಿಗೆ ಕ್ರಮ

ಹಿಂದುಳಿದ ವರ್ಗಗಳ ಕಲ್ಯಾಣ

  • ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ ₹50 ಕೋಟಿ.

  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ ₹422 ಕೋಟಿ ಅನುದಾನ.

  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.

  • ಹಿಂದುಳಿದ ವರ್ಗಗಳ ನಿಗಮಗಳ ಮೂಲಕ ನಿರುದ್ಯೋಗಿಗಳಿಗೆ ವಿದ್ಯುತ್‌ ಚಾಲಿತ ನಾಲ್ಕು ಚಕ್ರಗಳ ವಾಹನದಲ್ಲಿ, ಆಹಾರ ಕಿಯೋಸ್ಕ್‌ ಪ್ರಾರಂಭಿಸಲು ತಲಾ ₹3 ಲಕ್ಷ ವರೆಗೆ ಸಹಾಯಧನ ಸೌಲಭ್ಯ.

  • ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.

  • ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ ಸಂಗೊಳ್ಳಿ ಮತ್ತು ನಂದಗಡದಲ್ಲಿ ₹28 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ.

  • ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು ₹15 ಕೋಟಿ.

  • ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು ₹25 ಕೋಟಿ.

  • ಹಿಂದುಳಿದ ವರ್ಗಗಳಿಗೆ ಸೇರಿದ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನ.

  • IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.

  • ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ಸಮುದಾಯಗಳಿಗೆ ಪ್ರತಿ ಕೈಗಾರಿಕಾ ಪ್ರದೇಶದ ಹಂಚಿಕೆಯಲ್ಲಿ ಶೇ.20ರಷ್ಟು ಭೂಮಿ ಮೀಸಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.