ADVERTISEMENT

ಬೊಮ್ಮಾಯಿ ಬಜೆಟ್ 2022: ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 9:32 IST
Last Updated 4 ಮಾರ್ಚ್ 2022, 9:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಭಕ್ತರ ಬಹುಕಾಲದ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ದೇಗುಲಗಳೇ ತನ್ನ ಅಭಿವೃದ್ಧಿ ಕಾಮಗಾರಿಗಳ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯವಾಗುವಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ 2021-22ನೇ ಸಾಲಿನಲ್ಲಿ ₹ 168 ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ₹ 25 ಕೋಟಿ ವೆಚ್ಚ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳ ಅರ್ಚಕರ ಮತ್ತು ನೌಕರರಿಗೆ ನೆರವಾಗಲು ತಸ್ತೀಕ್ ಮೊತ್ತವನ್ನು ₹ 48 ಸಾವಿರದಿಂದ ₹ 60 ಸಾವಿರಕ್ಕೆ ಹೆಚ್ಚಿಸಲಾಗುವುದು. ಭಕ್ತರಿಗೆ ಆನ್‌ಲೈನ್ ಮೂಲಕವೇ ವಿವಿಧ ಸೇವೆಗಳನ್ನು ಒದಗಿಸಲು ಸಂಯೋಜಿತ ದೇವಾಲಯ ನಿರ್ವಹಣಾ ವ್ಯವಸ್ಥೆ (Integrated Temple Management System) ತಂತ್ರಾಂಶವನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

ಮಹಾರಾಷ್ಟ್ರದ ಪಂಡರಾಪುರಕ್ಕೆ ರಾಜ್ಯದಿಂದ ಭೇಟಿ ನೀಡುವ ಭಕ್ತರಿಗಾಗಿ ಅತಿಥಿ ಗೃಹವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.