ADVERTISEMENT

ಬಜೆಟ್‌ಗೂ ಮುನ್ನ ಪೂಜೆ ನೆರವೇರಿಸಿದ ಅನುರಾಗ್ ಠಾಕೂರ್

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 3:35 IST
Last Updated 1 ಫೆಬ್ರುವರಿ 2021, 3:35 IST
   

ನವದೆಹಲಿ: ಕೊರೊನಾ ಸಂಕಷ್ಟದ ಬಳಿಕ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಈ ಮಧ್ಯೆ, ಬಜೆಟ್ ಮಂಡನೆಗೂ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಬೆಳಗ್ಗೆಯೇ ಕಚೇರಿಗೆ ಆಗಮಿಸಿರುವ ಅವರು ಬಜೆಟ್ ಮಂಡನೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ.ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ, ಅನುರಾಗ್ ಠಾಕೂರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಹಕಾರ ನೀಡಲಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅನುರಾಗ್‌ ಠಾಕೂರ್‌,'ಬಜೆಟ್ ಜನರ ನಿರೀಕ್ಷೆಗೆ ಅನುಗುಣವಾಗಿರುತ್ತದೆ. 'ಸಬ್‌ ಕಾ ಸಾಥ್‌, ಸಬ್‌ಕಾ ವಿಕಾಸ್, ಸಬ್‌ ಕಾ ವಿಶ್ವಾಸ್' ಮಂತ್ರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸರ್ಕಾರವು 'ಆತ್ಮನಿರ್ಭರ ಭಾರತ' ಪ್ಯಾಕೇಜ್ ಘೋಷಿಸುವ ಮೂಲಕ ದೇಶಕ್ಕೆ ಆರ್ಥಿಕತೆಗೆ ಹೊಸ ದಿಕ್ಕು ನೀಡಿದೆ. ಈ ಕಾರ್ಯಕ್ರಮ ಕೋವಿಡ್‌ ಸಾಂಕ್ರಾಮಿಕದಿಂದ ದೇಶವನ್ನು ರಕ್ಷಿಸುತ್ತದೆ ಮತ್ತು ಆರ್ಥಿಕತೆಯನ್ನು ಶೀಘ್ರವಾಗಿ ಹಳಿಗೆ ತರುತ್ತದೆ,' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.