ನವದೆಹಲಿ: ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ಸಬ್ ಅರ್ಬನ್ ಮತ್ತು ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ ರೈಲು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದು, ಬೆಂಗಳೂರಿಗರ ಹರ್ಷಕ್ಕೆ ಕಾರಣವಾಗಿದೆ.
ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ವಿಚಾರ ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್ ಅವರು, ‘ಈ ಯೋಜನೆಗೆ ₹18600 ಕೋಟಿ ಮೀಸಲು ಇರಿಸುವ ಮೂಲಕ ಶೇ.60 ರಷ್ಟು ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.
‘2023ರ ಒಳಗೆ ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಯೋಜನೆ ಮುಗಿಸಲು ಅಗತ್ಯ ಕ್ರಮಗೊಳ್ಳಲಾಗಿದೆ’ ಎಂದರು.
ಬೃಹತ್ ಸೋಲಾರ್ ಯೋಜನೆಗೆ ರೂಪರೇಷೆ
‘ರೈಲ್ವೇ ಟ್ರ್ಯಾಕ್ ಬದಿ ಇರುವ ಖಾಲಿ ಜಾಗದಲ್ಲಿ ಸೋಲಾರ್ ಫಲಕಗಳ ಅಳವಡಿಕೆಗೆ ಹೊಸ ಯೋಜನೆ ರೂಪಿಸಲಾಗುವುದು. ಆ ಮೂಲಕ ದೇಶದಾದ್ಯಂತ ರೈಲ್ವೆ ಹಳಿಗಳ ಪಕ್ಕ ಸೋಲಾರ್ ಪ್ಯಾನೆಲ್ ನಿರ್ಮಿಸಲಾಗುವುದು‘ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿ ಬಜೆಟ್ನಲ್ಲಿ ಮಂಡಿಸಿದ ಪ್ರಮುಖ ಅಂಶಗಳು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.