ADVERTISEMENT

ಎನ್‌ಬಿಎಫ್‌ಸಿ, ಎಚ್‌ಎಫ್‌ಸಿಗಳಿಗೆ ‌₹ 6,400 ಕೋಟಿ ಮಂಜೂರು

ಕೇಂದ್ರ ಸರ್ಕಾರದ ವಿಶೇಷ ನಗದು ಯೋಜನೆ

ಪಿಟಿಐ
Published 8 ಆಗಸ್ಟ್ 2020, 10:58 IST
Last Updated 8 ಆಗಸ್ಟ್ 2020, 10:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಿಶೇಷ ನಗದು ಯೋಜನೆಯಡಿ ಬ್ಯಾಂಕೇತರ ಹಣಕಾಸು ಕಂಪನಿ (ಎನ್‌ಬಿಎಫ್‌ಸಿ) ಮತ್ತು ಗೃಹ ಹಣಕಾಸು ಕಂಪನಿಗಳಿಗೆ (ಎಚ್‌ಎಫ್‌ಸಿ) ಒಟ್ಟಾರೆ ₹ 6,300 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

₹ 20.97 ಲಕ್ಷ ಕೋಟಿ ಮೊತ್ತದ ‘ಆತ್ಮನಿರ್ಭರ ಭಾರತ’ ಪ್ಯಾಕೇಜ್‌ ಅಡಿಯಲ್ಲಿ ಜುಲೈ 1ರಂದು ₹ 30 ಸಾವಿರ ಕೋಟಿ ಮೊತ್ತದ ವಿಶೇಷ ನಗದು ಯೋಜನೆಗೆ ಚಾಲನೆ ನೀಡಲಾಗಿದೆ. ಎನ್‌ಬಿಎಫ್‌ಸಿ ಮತ್ತು ಎಚ್‌ಎಫ್‌ಸಿಗಳ ನಗದು ಸಮಸ್ಯಗಳನ್ನು ಬಗೆಹರಿಸುವುದು ಯೋಜನೆಯ ಮೂಲ ಉದ್ದೇಶವಾಗಿದೆ.

ಒಟ್ಟಾರೆ ₹ 11,037 ಕೋಟಿ ಮೊತ್ತದ ನೆರವಿಗಾಗಿ ಅರ್ಜಿ ಸಲ್ಲಿಕೆಯಾಗಿವೆ. ಅದರಲ್ಲಿ ಆಗಸ್ಟ್‌ 7ರವರೆಗೆ ₹ 6,399 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಟ್ವೀಟರ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

ಐಎಲ್‌ಆ್ಯಂಡ್‌ಎಫ್‌ಸಿ ಸಮೂಹ ಸಂಸ್ಥೆಗಳು ಎನ್‌ಬಿಎಫ್‌ಸಿ ಮತ್ತು ಎಚ್‌ಎಫ್‌ಸಿಗಳಿಗೆ ಭಾರಿ ಮೊತ್ತದ ಸಾಲವನ್ನು ಬಾಕಿ ಉಳಿಸಿಕೊಂಡಿವೆ. ಇದರಿಂದಾಗಿ ಇವುಗಳು ನಗದು ಬಿಕ್ಕಟ್ಟು ಎದುರಿಸುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.