ADVERTISEMENT

‘ಏರ್‌ಇಂಡಿಯಾ: ಮಾರಾಟ ಆಗದಿದ್ದರೆ ಮುಚ್ಚಬೇಕಾಗುತ್ತದೆ’

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2019, 20:07 IST
Last Updated 27 ನವೆಂಬರ್ 2019, 20:07 IST

ನವದೆಹಲಿ (ರಾಯಿಟರ್ಸ್‌): ‘ನಷ್ಟದಲ್ಲಿರುವ ಏರ್‌ ಇಂಡಿಯಾದ ಖಾಸಗೀಕರಣ ಸಾಧ್ಯವಾಗದೇ ಇದ್ದರೆ, ಸಂಸ್ಥೆಯನ್ನು ಮುಚ್ಚಬೇಕಾಗುತ್ತದೆ’ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಹೇಳಿದ್ದಾರೆ.

‘ಮಾರಾಟ ಮಾಡಲು ಬಿಡ್‌ ಕರೆಯುವ ಪ್ರಕ್ರಿಯೆ ಅಂತಿಮಗೊಳಿಸಲಾಗುತ್ತಿದೆ. ನೌಕರರ ಹಿತರಕ್ಷಣೆ ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಿದೆ. ಒಂದೊಮ್ಮೆ ಮಾರಾಟ ಮಾಡಲು ಸಾಧ್ಯವಾಗದೇ ಇದ್ದರೆ ಬಾಗಿಲು ಹಾಕುವುದು ಅನಿವಾರ್ಯವಾಗಲಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT