ADVERTISEMENT

ಕಾರ್ಪೊರೇಟ್‌ ಕಂಪನಿಗಳಿಂದ ಬ್ಯಾಂಕ್‌; ಆರ್‌ಬಿಐ ಅಭಿಪ್ರಾಯ ಅಲ್ಲ: ದಾಸ್‌ ಸ್ಪಷ್ಟನೆ

ಪಿಟಿಐ
Published 4 ಡಿಸೆಂಬರ್ 2020, 19:42 IST
Last Updated 4 ಡಿಸೆಂಬರ್ 2020, 19:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ‘ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅವಕಾಶ ಕೊಡಬೇಕು ಎನ್ನುವುದು ಆರ್‌ಬಿಐನ ಅಭಿಪ್ರಾಯ ಅಥವಾ ನಿರ್ಧಾರ ಅಲ್ಲ. ಆ ಕುರಿತು ಆರ್‌ಬಿಐನ ಆಂತರಿಕ ಸಮಿತಿ ಸಲಹೆ ನೀಡಿದೆಯಷ್ಟೇ’ ಎಂದು ಗವರ್ನರ್‌ ಶಕ್ತಿಕಾಂತ್‌ ದಾಸ್‌ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಷೇರುದಾರರು ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆದ ನಂತರ ಆರ್‌ಬಿಐ ಒಂದು ನಿರ್ಧಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

ಆರ್‌ಬಿಐನ ಮಾಜಿ ಗವರ್ನರ್‌ ರಘುರಾಂ ರಾಜನ್‌ ಸೇರಿದಂತೆ ಹಲವರಿಂದ ಸಮಿತಿಯ ಸಲಹೆಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.