ಬೆಂಗಳೂರು: ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ನೆರವಾಗುವ ಉದ್ದೇಶದಿಂದ ‘ಮಹಿಳೆಯರ ಆತ್ಮನಿರ್ಭರ’ ಎನ್ನುವ ವಿಶೇಷ ಯೋಜನೆಯನ್ನು ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಜಾರಿಗೊಳಿಸಿದೆ.
ತನ್ನ ಚಿನ್ನದ ಸಾಲ ಯೋಜನೆಯಡಿಯಲ್ಲಿ ಇದನ್ನು ಜಾರಿಗೊಳಿಸಿದೆ. ಬ್ಯಾಂಕ್ನ ರಾಮಮೂರ್ತಿ ನಗರ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಛಧಾ ಯೋಜನೆಗೆ ಚಾಲನೆ ನೀಡಿದರು. ಬ್ಯಾಂಕ್ನ ಮುಂಬೈ ಕಾರ್ಪೊರೇಟ್ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕ ವಿಕ್ರಮಾದಿತ್ಯ ಸಿಂಗ್ ಖಿಚಿ, ಬ್ಯಾಂಕ್ನ ಬೆಂಗಳೂರು ವಲಯದ ಮುಖ್ಯಸ್ಥೆ ಮಿನಿ ಟಿ.ಎಂ. ಮತ್ತು ಇತರ ಕೆಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.