ADVERTISEMENT

‘ಬಿಒಐ’ನಿಂದ ಗ್ರಾಹಕ ಸಂಪರ್ಕ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2019, 19:31 IST
Last Updated 3 ಅಕ್ಟೋಬರ್ 2019, 19:31 IST

ಬೆಂಗಳೂರು : ಗ್ರಾಹಕರ ಜತೆ ನಿರಂತರ ಒಡನಾಟ, ಅವರಿಗೆ ಉತ್ತಮ ಸೇವೆ ಒದಗಿಸುವುದು ಬ್ಯಾಂಕ್‌ಗಳ ಧ್ಯೇಯವಾಗಿರಬೇಕು ಎಂದು ಬ್ಯಾಂಕ್ ಆಫ್‌ ಇಂಡಿಯಾದ (ಬಿಒಐ) ವಲಯ ಪ್ರಬಂಧಕ ಪ್ರಮೋದ್ ಕುಮಾರ್ ಬತಾಲ್‌ ಹೇಳಿದ್ದಾರೆ.

ಎರಡು ದಿನಗಳ ಗ್ರಾಹಕ ಸಂಪರ್ಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು
ಮಾತನಾಡುತ್ತಿದ್ದರು.

ಬ್ಯಾಂಕ್ ಸೇವೆಗಳ ಬಗ್ಗೆಗ್ರಾಹಕರಿಗೆ ಹೆಚ್ಚಿನ ತಿಳಿವಳಿಕೆ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿಜಿಟಲ್‌ ಬ್ಯಾಂಕಿಂಗ್‌ ಜನಪ್ರಿಯತೆಗೊಳಿಸುವುದೂ ಇದರ ಉದ್ದೇಶವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.